ವಾಲ್ಮೀಕಿ ಸಮುದಾಯವನ್ನು ಜಾಗೃತಗೊಳಿಸುವುದಕ್ಕಾಗಿಯೇ ವರ್ಷಕ್ಕೊಮ್ಮೆ ನಡೆಯುತ್ತದೆ ವಾಲ್ಮೀಕಿ ಜಾತ್ರೆ. ಜಾತ್ರೆಗೆ ಈ ಬಾರಿ ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಿಂದ ವಾಲ್ಮೀಕಿ ಪೀಠದವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಸುವ ಮೂಲಕ ಚಾಲನೆ ನೀಡಲಾಯಿತು. ಪೂರ್ಣಕುಂಭ ಹೊತ್ತ ಮಹಿಳೆಯರು, ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.