<p><strong>ದಾವಣಗೆರೆ: </strong>ಇಲ್ಲಿನ ಬಸಾಪುರದಲ್ಲಿ ಮಂಗಳವಾರ ಮಹೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಿತು. ನಗರ, ಸುತ್ತಮುತ್ತಲ ಗ್ರಾಮಗಳ ಜನರು ಹಬ್ಬದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.</p>.<p>ಕೊರೊನಾ ಕಾರಣದಿಂದ ಕಳೆದ ವರ್ಷ ಬಸಾಪುರದ ಜಾತ್ರೆಯಲ್ಲಿ ಸಂಭ್ರಮ ಇರಲಿಲ್ಲ. ಎರಡು ದಿನಗಳ ಕಾಲ ನಡೆಯುವ ಹಬ್ಬವನ್ನು ಒಂದೇ ದಿನದಲ್ಲಿ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ವೈಭವದಿಂದ ಜಾತ್ರೆ ನಡೆಯಿತು.</p>.<p>ಮಹೇಶ್ವರ ಸ್ವಾಮಿಯ ಗದ್ದುಗೆ ಸಮೀಪ ಇರುವ ಪುಷ್ಕರಣಿಯಲ್ಲಿ ಸ್ವಾಮೀಜಿ ಒಬ್ಬರು ಮುಳುಗಿ ಮೃತ್ತಿಕೆಯನ್ನು ತಂದರು. ಅದನ್ನು 2 ಬಾಳೇಹಣ್ಣಿನ ಚಿಪ್ಪಿನಲ್ಲಿಟ್ಟು ಪೂಜಿಸ ಲಾಯಿತು. ನಂತರ ಪುಷ್ಕರಣೆ ವಿಸರ್ಜಿಸ ಲಾಯಿತು. ಎರಡೂ ಚಿಪ್ಪುಗಳು ತೇಲಿದ್ದರಿಂದ ಗ್ರಾಮಸ್ಥರ ಸಂಭ್ರಮ ಇಮ್ಮಡಿಯಾಯಿತು.</p>.<p>ವಿಸರ್ಜಿಸಿದ ಎರಡೂ ಚಿಪ್ಪುಗಳು ಮುಳುಗಿದರೆ ಗಂಡಾಂತರವೆಂದೂ, ಎರಡೂ ತೇಲಿದರೆ ತುಂಬಾ ಒಳ್ಳೆಯದೆಂದೂ, ಒಂದು ತೇಲಿ ಒಂದು ಮುಳುಗಿದರೆ ಸಾಧಾರಣ ಫಲ ಎಂಬುದು ಇಲ್ಲಿನ ಗ್ರಾಮಸ್ಥರ ನಂಬಿಕೆಯಾಗಿದೆ.</p>.<p>ಮಹೇಶ್ವರ ಗದ್ದುಗೆ ಬಳಿ ಆನೆಕೊಂಡದ ಬಸವೇಶ್ವರ ಸ್ವಾಮಿ, ಬಸಾಪುರದ ಗುರುಸಿದ್ದೇಶ್ವರ ಸ್ವಾಮಿ ಹಾಗೂ ಹಾಲಸ್ವಾಮಿ ದೇವರ ವಿಗ್ರಹಗಳ ಸಮಾಗಮವಾಗಿತ್ತು.ಜೊತೆಗೆ ಆನೆಕೊಂಡದ ಬಸವೇಶ್ವರ ಸ್ವಾಮಿಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು. ನಂತರ ಒಲೆ ಹಚ್ಚಿ ಪ್ರಸಾದ ತಯಾರಿಸಲಾಯಿತು.</p>.<p><strong>ವಿವಿಧೆಡೆ ಜಾತ್ರೆ: </strong>ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಹೇಶ್ವರ ಜಾತ್ರೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹೇಶ್ವರನನ್ನು ಪೂಜಿಸಿದ ಜನರು ಪ್ರಸಾದವಾಗಿ ಅನ್ನ, ಹಾಲು,ಪುಡಿ ಬೆಲ್ಲ,ಬಾಳೆ ಹಣ್ಣು ಬೆರೆಸಿ ಸ್ವೀಕರಿಸಿದರು.</p>.<p>ದಸರಾ, ದೀಪಾವಳಿ, ಯುಗಾದಿ ಮುಂತಾದ ಹಬ್ಬಗಳನ್ನು ಮನೆಗಳಲ್ಲಿ ಮನೆಯವರೊಂದಿಗೆ ಮಾಡಿದರೆ, ಮಹೇಶ್ವರ ಜಾತ್ರೆಯನ್ನು ಊರ ಹೊರ ಭಾಗದ ದೇವ ಸ್ಥಾನದ ಆವರಣ ಅಥವಾ ತೋಟದಲ್ಲಿ ಮಾಡಲಾಗುತ್ತದೆ.</p>.<p>ಹಬ್ಬಕ್ಕಾಗಿ ಗ್ರಾಮಸ್ಥರು ಒಂದೆರಡು ದಿನಗಳ ಮೊದಲೇ ಹಬ್ಬ ಆಚರಿಸುವ ಸ್ಥಳವನ್ನ ಶುದ್ಧಗೊಳಿಸಿ, ಮಹೇಶ್ವರನ ಗದ್ದುಗೆ ಸ್ಥಾಪಿಸಿ ತಯಾರಿಯಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಚಿಕ್ಕ ಮಕ್ಕಳು, ಯುವಕರು ಇಳಿ ವಯಸ್ಸಿನ ಹಿರಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಇಲ್ಲಿನ ಬಸಾಪುರದಲ್ಲಿ ಮಂಗಳವಾರ ಮಹೇಶ್ವರ ಜಾತ್ರೆ ಅದ್ದೂರಿಯಾಗಿ ನಡೆಯಿತು. ನಗರ, ಸುತ್ತಮುತ್ತಲ ಗ್ರಾಮಗಳ ಜನರು ಹಬ್ಬದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.</p>.<p>ಕೊರೊನಾ ಕಾರಣದಿಂದ ಕಳೆದ ವರ್ಷ ಬಸಾಪುರದ ಜಾತ್ರೆಯಲ್ಲಿ ಸಂಭ್ರಮ ಇರಲಿಲ್ಲ. ಎರಡು ದಿನಗಳ ಕಾಲ ನಡೆಯುವ ಹಬ್ಬವನ್ನು ಒಂದೇ ದಿನದಲ್ಲಿ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ವೈಭವದಿಂದ ಜಾತ್ರೆ ನಡೆಯಿತು.</p>.<p>ಮಹೇಶ್ವರ ಸ್ವಾಮಿಯ ಗದ್ದುಗೆ ಸಮೀಪ ಇರುವ ಪುಷ್ಕರಣಿಯಲ್ಲಿ ಸ್ವಾಮೀಜಿ ಒಬ್ಬರು ಮುಳುಗಿ ಮೃತ್ತಿಕೆಯನ್ನು ತಂದರು. ಅದನ್ನು 2 ಬಾಳೇಹಣ್ಣಿನ ಚಿಪ್ಪಿನಲ್ಲಿಟ್ಟು ಪೂಜಿಸ ಲಾಯಿತು. ನಂತರ ಪುಷ್ಕರಣೆ ವಿಸರ್ಜಿಸ ಲಾಯಿತು. ಎರಡೂ ಚಿಪ್ಪುಗಳು ತೇಲಿದ್ದರಿಂದ ಗ್ರಾಮಸ್ಥರ ಸಂಭ್ರಮ ಇಮ್ಮಡಿಯಾಯಿತು.</p>.<p>ವಿಸರ್ಜಿಸಿದ ಎರಡೂ ಚಿಪ್ಪುಗಳು ಮುಳುಗಿದರೆ ಗಂಡಾಂತರವೆಂದೂ, ಎರಡೂ ತೇಲಿದರೆ ತುಂಬಾ ಒಳ್ಳೆಯದೆಂದೂ, ಒಂದು ತೇಲಿ ಒಂದು ಮುಳುಗಿದರೆ ಸಾಧಾರಣ ಫಲ ಎಂಬುದು ಇಲ್ಲಿನ ಗ್ರಾಮಸ್ಥರ ನಂಬಿಕೆಯಾಗಿದೆ.</p>.<p>ಮಹೇಶ್ವರ ಗದ್ದುಗೆ ಬಳಿ ಆನೆಕೊಂಡದ ಬಸವೇಶ್ವರ ಸ್ವಾಮಿ, ಬಸಾಪುರದ ಗುರುಸಿದ್ದೇಶ್ವರ ಸ್ವಾಮಿ ಹಾಗೂ ಹಾಲಸ್ವಾಮಿ ದೇವರ ವಿಗ್ರಹಗಳ ಸಮಾಗಮವಾಗಿತ್ತು.ಜೊತೆಗೆ ಆನೆಕೊಂಡದ ಬಸವೇಶ್ವರ ಸ್ವಾಮಿಯ ವಿಗ್ರಹವನ್ನು ಮೆರವಣಿಗೆ ಮೂಲಕ ಕರೆ ತರಲಾಯಿತು. ನಂತರ ಒಲೆ ಹಚ್ಚಿ ಪ್ರಸಾದ ತಯಾರಿಸಲಾಯಿತು.</p>.<p><strong>ವಿವಿಧೆಡೆ ಜಾತ್ರೆ: </strong>ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಹೇಶ್ವರ ಜಾತ್ರೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹೇಶ್ವರನನ್ನು ಪೂಜಿಸಿದ ಜನರು ಪ್ರಸಾದವಾಗಿ ಅನ್ನ, ಹಾಲು,ಪುಡಿ ಬೆಲ್ಲ,ಬಾಳೆ ಹಣ್ಣು ಬೆರೆಸಿ ಸ್ವೀಕರಿಸಿದರು.</p>.<p>ದಸರಾ, ದೀಪಾವಳಿ, ಯುಗಾದಿ ಮುಂತಾದ ಹಬ್ಬಗಳನ್ನು ಮನೆಗಳಲ್ಲಿ ಮನೆಯವರೊಂದಿಗೆ ಮಾಡಿದರೆ, ಮಹೇಶ್ವರ ಜಾತ್ರೆಯನ್ನು ಊರ ಹೊರ ಭಾಗದ ದೇವ ಸ್ಥಾನದ ಆವರಣ ಅಥವಾ ತೋಟದಲ್ಲಿ ಮಾಡಲಾಗುತ್ತದೆ.</p>.<p>ಹಬ್ಬಕ್ಕಾಗಿ ಗ್ರಾಮಸ್ಥರು ಒಂದೆರಡು ದಿನಗಳ ಮೊದಲೇ ಹಬ್ಬ ಆಚರಿಸುವ ಸ್ಥಳವನ್ನ ಶುದ್ಧಗೊಳಿಸಿ, ಮಹೇಶ್ವರನ ಗದ್ದುಗೆ ಸ್ಥಾಪಿಸಿ ತಯಾರಿಯಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಚಿಕ್ಕ ಮಕ್ಕಳು, ಯುವಕರು ಇಳಿ ವಯಸ್ಸಿನ ಹಿರಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>