ಶಿಶು ಅಭಿವೃದ್ಧಿ ಯೋಜನೆ ಸಹಾಯಕ ಅಧಿಕಾರಿ ಸವಿತಾ ಕೀರ್ತಿ ಮಾತನಾಡಿ, ಸರ್ಕಾರವು ಮಹಿಳೆಯರಿಗೆ ಸಾಕಷ್ಟು ಯೋಜನೆ ಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಾಕಷ್ಟು ಪ್ರತಿಭೆಯಿದ್ದರೂ ನಮ್ಮ ಜನಾಂಗದ ಮಕ್ಕಳು ಪಾಲ್ಗೊಳ್ಳದಿರುವುದು ಬೇಸರದ ವಿಚಾರ’ ಎಂದರು.ನಂತರ, ನಡೆದ ಸ್ಪರ್ಧೆಗಳಿಗೆ ಕೋಟೆರ ಮೀರಾ ಪೂಣಚ್ಚ ಚಾಲನೆ ನೀಡಿದರು. ತೀರ್ಪುಗಾರರಾಗಿ ಚೌರೀರ ಸುಜು, ಪಳಂಗಂಡ ಕಮಲಾ, ಕಲಿಯಂಡ ಸರಸ್ವತಿ, ಐಮುಡಿಯಂಡ ರಾಣಿ ಮಾಚಯ್ಯ, ಮಾದೇಟಿರ ಬೆಳ್ಯಪ್ಪ ಕಾರ್ಯ ನಿರ್ವಹಿಸಿದರು.ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಯಿತು.