<p><strong>ದಾವಣಗೆರೆ:</strong> ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯಲ್ಲಿ ಇನ್ನೂ ಕೇಂದ್ರವನ್ನು ತೆರೆದಿಲ್ಲ. ಎಥೆನಾಲ್ ಉತ್ಪಾದಿಸುವ ಘಟಕಗಳ ಮಾಲೀಕರ ಮನವೊಲಿಸಿ ಅಗತ್ಯ ಠೇವಣಿ ಪಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಆರೋಪಿಸಿದರು.</p>.<p>‘ಎಥೆನಾಲ್ ಉತ್ಪಾದಿಸುವ ಡಿಸ್ಟಲಿರಿಗಳು ಮೆಕ್ಕೆಜೋಳದ ಶೇ 50ರಷ್ಟನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ಸರ್ಕಾರ ಸೂಚಿಸಿದೆ. ಕುಕ್ಕವಾಡದ ‘ದಾವಣಗೆರೆ ಶುಗರ್ ಕಂಪನಿ ಲಿಮಿಟೆಡ್’ 729 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಬೇಕಿದೆ. ಈ ಮೊತ್ತದ ಅರ್ಧದಷ್ಟನ್ನು ಠೇವಣಿ ಇಟ್ಟಿಲ್ಲ. ಇದೇ ನೆಪವನ್ನು ಮುಂದಿಟ್ಟುಕೊಂಡು ಖರೀದಿ ಕೇಂದ್ರ ಕಾರ್ಯಾರಂಭವಾಗಿಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಹಾವೇರಿ ಜಿಲ್ಲೆಯಲ್ಲಿ 3 ಡಿಸ್ಟಿಲರಿ ಘಟಕಗಳಿದ್ದು, ಎಲ್ಲೆಡೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಫೌಲ್ಟ್ರಿಫಾರಂ ಹಾಗೂ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಕೂಡ ಮೆಕ್ಕೆಜೋಳ ಖರೀದಿಸುತ್ತಿದೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಇದು ಸಾಧ್ಯವಾಗುತ್ತಿಲ್ಲ. ಜಿಲ್ಲಾಧಿಕಾರಿಗೆ ರೈತರ ಬಗ್ಗೆ ಕಾಳಜಿ ಇಲ್ಲ’ ಎಂದು ದೂರಿದರು.</p>.<p>‘ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ರಾಜ್ಯ ಸರ್ಕಾರ ₹ 250 ಸಹಾಯಧನ ಘೋಷಿಸಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (ಎಪಿಎಂಸಿ) ಮೆಕ್ಕೆಜೋಳ ಮಾರಾಟ ಮಾಡಿದ ಎಲ್ಲ ರೈತರಿಗೂ ಈ ಸೌಲಭ್ಯ ಸಿಗಬೇಕು. ಮಾರಾಟ ಮಾಡಿದ ರಸೀದಿ ಆಧಾರದಲ್ಲಿ ರೈತರಿಗೆ ಸಹಾಯಧನ ವಿತರಿಸಬೇಕು. ಸಹಾಯಧನದಲ್ಲಿ ಮೆಕ್ಕೆಜೋಳ ಮಾರಾಟ ಮಾಡುವ ರೈತರಿಗೆ ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡರಾದ ಹೂವಿನಮಡು ನಾಗರಾಜ್, ಹೊಸಹಳ್ಳಿ ಮೋಹನ್, ಚಿನ್ನಸಮುದ್ರ ಸುರೇಶ್, ದಾವಲ್ ನಾಯ್ಕ ಹಾಜರಿದ್ದರು.</p>.<div><blockquote>ಎಥೆನಾಲ್ ಉತ್ಪಾದಕರು ಅಧಿಕೃತ ಏಜೆನ್ಸಿಗಳಿಂದ ಮೆಕ್ಕೆಜೋಳ ಖರೀದಿಸಬೇಕು. ಆದರೆ ರೈತರು ವ್ಯಾಪಾರಸ್ಥರಿಂದ ಕಡಿಮೆ ಬೆಲೆಗೆ ಖರೀದಿಸುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು </blockquote><span class="attribution">ಹುಚ್ಚವ್ವನಹಳ್ಳಿ ಮಂಜುನಾಥ್ ಅಧ್ಯಕ್ಷ ರಾಜ್ಯ ರೈತ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯಲ್ಲಿ ಇನ್ನೂ ಕೇಂದ್ರವನ್ನು ತೆರೆದಿಲ್ಲ. ಎಥೆನಾಲ್ ಉತ್ಪಾದಿಸುವ ಘಟಕಗಳ ಮಾಲೀಕರ ಮನವೊಲಿಸಿ ಅಗತ್ಯ ಠೇವಣಿ ಪಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ಆರೋಪಿಸಿದರು.</p>.<p>‘ಎಥೆನಾಲ್ ಉತ್ಪಾದಿಸುವ ಡಿಸ್ಟಲಿರಿಗಳು ಮೆಕ್ಕೆಜೋಳದ ಶೇ 50ರಷ್ಟನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ಸರ್ಕಾರ ಸೂಚಿಸಿದೆ. ಕುಕ್ಕವಾಡದ ‘ದಾವಣಗೆರೆ ಶುಗರ್ ಕಂಪನಿ ಲಿಮಿಟೆಡ್’ 729 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಬೇಕಿದೆ. ಈ ಮೊತ್ತದ ಅರ್ಧದಷ್ಟನ್ನು ಠೇವಣಿ ಇಟ್ಟಿಲ್ಲ. ಇದೇ ನೆಪವನ್ನು ಮುಂದಿಟ್ಟುಕೊಂಡು ಖರೀದಿ ಕೇಂದ್ರ ಕಾರ್ಯಾರಂಭವಾಗಿಲ್ಲ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಹಾವೇರಿ ಜಿಲ್ಲೆಯಲ್ಲಿ 3 ಡಿಸ್ಟಿಲರಿ ಘಟಕಗಳಿದ್ದು, ಎಲ್ಲೆಡೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಲಾಗುತ್ತಿದೆ. ಫೌಲ್ಟ್ರಿಫಾರಂ ಹಾಗೂ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ಕೂಡ ಮೆಕ್ಕೆಜೋಳ ಖರೀದಿಸುತ್ತಿದೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಇದು ಸಾಧ್ಯವಾಗುತ್ತಿಲ್ಲ. ಜಿಲ್ಲಾಧಿಕಾರಿಗೆ ರೈತರ ಬಗ್ಗೆ ಕಾಳಜಿ ಇಲ್ಲ’ ಎಂದು ದೂರಿದರು.</p>.<p>‘ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ರಾಜ್ಯ ಸರ್ಕಾರ ₹ 250 ಸಹಾಯಧನ ಘೋಷಿಸಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (ಎಪಿಎಂಸಿ) ಮೆಕ್ಕೆಜೋಳ ಮಾರಾಟ ಮಾಡಿದ ಎಲ್ಲ ರೈತರಿಗೂ ಈ ಸೌಲಭ್ಯ ಸಿಗಬೇಕು. ಮಾರಾಟ ಮಾಡಿದ ರಸೀದಿ ಆಧಾರದಲ್ಲಿ ರೈತರಿಗೆ ಸಹಾಯಧನ ವಿತರಿಸಬೇಕು. ಸಹಾಯಧನದಲ್ಲಿ ಮೆಕ್ಕೆಜೋಳ ಮಾರಾಟ ಮಾಡುವ ರೈತರಿಗೆ ಖರೀದಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಮುಖಂಡರಾದ ಹೂವಿನಮಡು ನಾಗರಾಜ್, ಹೊಸಹಳ್ಳಿ ಮೋಹನ್, ಚಿನ್ನಸಮುದ್ರ ಸುರೇಶ್, ದಾವಲ್ ನಾಯ್ಕ ಹಾಜರಿದ್ದರು.</p>.<div><blockquote>ಎಥೆನಾಲ್ ಉತ್ಪಾದಕರು ಅಧಿಕೃತ ಏಜೆನ್ಸಿಗಳಿಂದ ಮೆಕ್ಕೆಜೋಳ ಖರೀದಿಸಬೇಕು. ಆದರೆ ರೈತರು ವ್ಯಾಪಾರಸ್ಥರಿಂದ ಕಡಿಮೆ ಬೆಲೆಗೆ ಖರೀದಿಸುತ್ತಿದ್ದಾರೆ. ಈ ಕುರಿತು ತನಿಖೆ ನಡೆಸಬೇಕು </blockquote><span class="attribution">ಹುಚ್ಚವ್ವನಹಳ್ಳಿ ಮಂಜುನಾಥ್ ಅಧ್ಯಕ್ಷ ರಾಜ್ಯ ರೈತ ಸಂಘ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>