ಟೂರ್ನಿಯಲ್ಲಿ ಉತ್ತಮ ದಾಳಿಕಾರ ನಾಗಿ ಮಂಜೂರು ತಮ್ಮಣ್ಣಿ ತಂಡದ ಮಿಥುನ್, ಉತ್ತಮ ಹಿಡಿತಗಾರನಾಗಿ ವಸಂತ ಪೂಜಾರಿ ತಂಡದ ಸ್ವಾಮಿ, ಸರ್ವೋತ್ತಮ ಆಟಗಾರನಾಗಿ ಹೋಟೆಲ್ ಮಿನಿಸ್ಟರ್ ಕೋರ್ಟ್ಸ್ ತಂಡದ ಆದರ್ಶ್ ಬಹುಮಾನ ಪಡೆದರು.17 ವರ್ಷದೊಳಗಿನ ವಿದ್ಯಾರ್ಥಿ ಗಳಿಗಾಗಿ ಆಯೋಜಿಸಿದ್ದ ಬಾಲಕರ ಕಬಡ್ಡಿ ಟೂರ್ನಿಯಲ್ಲಿ ತೋಳೂರು ಶೆಟ್ಟಳ್ಳಿಯ ಮೊಗೇರಾ ಕ್ಷೇಮಾಭಿವೃದ್ಧಿ ಸಂಘದ ತಂಡ ಪ್ರಥಮ ಸ್ಥಾನ ಗಳಿಸಿದರೆ, ಕೋವರ್ಕೊಲ್ಲಿ ಸೆವೆನ್ ವಾರಿಯರ್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕ ಕೂಡಿಗೆಯ ಎ.ಎಂ.ಆನಂದ್, ಗೌಡಳ್ಳಿಯ ಪ್ರವೀಣ್, ಬೇಳೂರಿನ ಎಚ್.ಬಿ.ಕೃಷ್ಣಪ್ಪ, ಹಂಡ್ಲಿಯ ಕೃಷ್ಣಪ್ಪ, ಕೂಡ್ಲೂರಿನ ಚೇತನ್ ಹಾಗೂ ಕುಸುಬೂರಿನ ಉಲ್ಲಾಸ್ ಕಾರ್ಯನಿರ್ವಹಿಸಿದರು.