<p>ಮಲೇಬೆನ್ನೂರು: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ರೂಪಿಸಿದ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನ ಒದಗಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್</p>.<p>ಪಟ್ಟಣದ ಪುರಸಭಾ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 4 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ಈಚೆಗೆ ವಿತರಿಸಿ ಶಾಸಕ ಬಿ.ಪಿ. ಹರೀಶ್ ಮಾತನಾಡಿದರು.</p>.<p>ಬಹುದಿನದಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಅಂಗವಿಕಲರ ಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ಪಡೆಯಲು ಯತ್ನಿಸಲಾಗುವುದು. ಫಲಾನುಭವಿಗಳು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸದುಪಯೋಗಪಡೆಸಿಕೊಳ್ಳಬೇಕು ಎಂದರು.</p>.<p>ಹಲವು ತಿಂಗಳಿಂದ ವಿತರಣೆಗಾಗಿ ಕಾದು ನಿಂತಿದ್ದ ತ್ರಿಚಕ್ರವಾಹನಗಳು ಕೊನೆಗೂ ಫಲಾನುಭವಿಗಳ ಕೈ ಸೇರಿದವು. ವಾಹನಗಳ ಕೀಲಿ ಕೈ ಪಡೆದು ಸವಾರಿ ಮಾಡಿದ ಫಲಾನುಭವಿಗಳಾದ ಮೊಹ್ಮದ್ ಅಲಿ, ಗಂಗಮ್ಮ, ಜಯಲಿಂಗಪ್ಪ, ಸಬರೀನ್ ತಾಜ್ ಮೊಗದಲ್ಲಿ ಮಂದಹಾಸ ಮೂಡಿತ್ತು.</p>.<p>ಪುರಸಭಾ ಪ್ರಭಾರಿ ಅಧ್ಯಕ್ಷೆ ಅಕ್ಕಮ್ಮ, ಮುಖ್ಯಾಧಿಕಾರಿ ರವಿಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶಬ್ಬೀರ್ ಖಾನ್, ಅಂಗವಿಕಲರ ಸಂಘಟನೆಯ ಗಂಗಾಧರ್ ಪೂಜಾರ್ ಹಾಗೂ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಕಚೇರಿ ಸಿಬ್ಬಂದಿ ಇದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಶಿವರಾಜ್ ನಿರೂಪಿಸಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-32485639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಅಂಗವಿಕಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಸರ್ಕಾರ ರೂಪಿಸಿದ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ಅನುದಾನ ಒದಗಿಸಬೇಕು ಎಂದು ಶಾಸಕ ಬಿ.ಪಿ. ಹರೀಶ್</p>.<p>ಪಟ್ಟಣದ ಪುರಸಭಾ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 4 ಅಂಗವಿಕಲ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ಈಚೆಗೆ ವಿತರಿಸಿ ಶಾಸಕ ಬಿ.ಪಿ. ಹರೀಶ್ ಮಾತನಾಡಿದರು.</p>.<p>ಬಹುದಿನದಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಅಂಗವಿಕಲರ ಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ ಪಡೆಯಲು ಯತ್ನಿಸಲಾಗುವುದು. ಫಲಾನುಭವಿಗಳು ವಾಹನವನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸದುಪಯೋಗಪಡೆಸಿಕೊಳ್ಳಬೇಕು ಎಂದರು.</p>.<p>ಹಲವು ತಿಂಗಳಿಂದ ವಿತರಣೆಗಾಗಿ ಕಾದು ನಿಂತಿದ್ದ ತ್ರಿಚಕ್ರವಾಹನಗಳು ಕೊನೆಗೂ ಫಲಾನುಭವಿಗಳ ಕೈ ಸೇರಿದವು. ವಾಹನಗಳ ಕೀಲಿ ಕೈ ಪಡೆದು ಸವಾರಿ ಮಾಡಿದ ಫಲಾನುಭವಿಗಳಾದ ಮೊಹ್ಮದ್ ಅಲಿ, ಗಂಗಮ್ಮ, ಜಯಲಿಂಗಪ್ಪ, ಸಬರೀನ್ ತಾಜ್ ಮೊಗದಲ್ಲಿ ಮಂದಹಾಸ ಮೂಡಿತ್ತು.</p>.<p>ಪುರಸಭಾ ಪ್ರಭಾರಿ ಅಧ್ಯಕ್ಷೆ ಅಕ್ಕಮ್ಮ, ಮುಖ್ಯಾಧಿಕಾರಿ ರವಿಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶಬ್ಬೀರ್ ಖಾನ್, ಅಂಗವಿಕಲರ ಸಂಘಟನೆಯ ಗಂಗಾಧರ್ ಪೂಜಾರ್ ಹಾಗೂ ಪದಾಧಿಕಾರಿಗಳು, ಪುರಸಭೆ ಸದಸ್ಯರು, ಕಚೇರಿ ಸಿಬ್ಬಂದಿ ಇದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಶಿವರಾಜ್ ನಿರೂಪಿಸಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-32485639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>