<p><strong>ಮಲೇಬೆನ್ನೂರು:</strong> ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಸಮರ್ಪಕ ಸೇವೆ ನೀಡದೆ ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿದ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಮುಖಂಡ ಹಾಳೂರು ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಧರಣಿ ನಡೆಸಿದರು.</p>.<p>ಸ್ಥಳಕ್ಕೆ ಪ್ರಭಾರ ಡಿಎಚ್ಒ ಮುರುಳೀಧರ್, ಟಿಎಚ್ಒ ಅಬ್ದುಲ್ ಖಾದರ್, ವೈದ್ಯಾಧಿಕಾರಿ ಪ್ರಶಾಂತ್, ತಹಶೀಲ್ದಾರ್ ಸಂತೋಷ ಕುಮಾರ್, ಉಪತಹಶೀಲ್ದಾರ್ ಆರ್. ರವಿ ಆಗಮಿಸಿ ಪ್ರತಿಭಟನಕಾರರ ಜತೆ ಸಮಾಲೋಚಿಸಿದರು.</p>.<p>ವೈದ್ಯರ ಬದಲಾವಣೆ, ನರ್ಸ್, ಸ್ಚಚ್ಛತಾ ಸಿಬ್ಬಂದಿ, ಪ್ರಯೋಗಾಲಯ ತಂತ್ರಜ್ಞರು, ಔಷಧ ವಿತರಕರು ಸಮಯಪಾಲನೆ ಮಾಡುತ್ತಿಲ್ಲ. ಎಲ್ಲರ ಬಯೋಮೆಟ್ರಿಕ್ ಹಾಜರಾತಿಯನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕು. ದಾವಣಗೆರೆಗೆ ನಿಯೋಜನೆಯಾಗಿರುವ ಸಿಬ್ಬಂದಿಯನ್ನು ವಾಪಸ್ ಕರೆಸಬೇಕು ಎಂದು ಧರಣಿ ನಿರತರು ಪಟ್ಟು ಹಿಡಿದರು.</p>.<p>ವೈದ್ಯರು ಔಷಧಗಳನ್ನು ಹೊರಗಡೆ ಖರೀದಿಸುವಂತೆ ಚೀಟಿ ಬರೆದುಕೊಡುತ್ತಾರೆ. ಉಗ್ರಾಣದಲ್ಲಿ ದಾಸ್ತಾನು ಇಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು ದಾಸ್ತಾನಿನ ಸಮಗ್ರ ದಾಖಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಅಧಿಕಾರಿಗಳು ಕ್ಷ–ಕಿರಣ ವಿಭಾಗ, ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಯಂತ್ರ ಕೆಟ್ಟಿರುವುದು, ಬೆಡ್ ಶೀಟ್ ಇಲ್ಲದಿರುವುದು ಕಂಡುಬಂದಿದೆ. ನೀವು ಭೇಟಿ ನೀಡುವ ಕಾರಣ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿಸಿದ್ದಾರೆ’ ಎಂದು ರೈತರು ಹೇಳಿದರು.</p>.<p>ಕಡರನಾಯ್ಕನಹಳ್ಳಿ ಭಾಗದಲ್ಲಿ ಚರ್ಮದ ತುರಿಕೆ ಕಾಯಿಲೆ ಕಾಣಿಸಿಕೊಂಡಿದೆ. ನದಿ ನೀರಿನ ಪರೀಕ್ಷೆ ಮಾಡಿಸಿ ಸಮಸ್ಯೆ ಪರಿಹರಿಸಲು ಮನವಿ ಮಾಡಿದರು. ಅಧಿಕಾರಿಗಳು ಪರಿಹರಿಸುವ ಭರವಸೆ ನೀಡಿದರು.</p>.<p>ಸ್ಥಳಕ್ಕೆ ಶಾಸಕ ಬಿ.ಪಿ. ಹರೀಶ್ ಆಗಮಿಸಿ, ಧರಣಿ ನಿರತರ ಜತೆ ಸಮಾಲೋಚನೆ ನಡೆಸಿದರು. ಅಧಿಕಾರಿಗಳು ನೀಡಿದ ಉತ್ತರಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಿಚ್ಚಿಟ್ಟರು.</p>.<p>‘ಆರೋಗ್ಯ ಇಲಾಖೆಯಲ್ಲಿ ವೈದ್ಯರ ಸಮಸ್ಯೆ, ಔಷಧಿ ಕೊರತೆ ಕುರಿತು ಸದನದಲ್ಲಿ ಚರ್ಚೆ ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಶಾಸಕ ಹರೀಶ್ ಬೇಸರ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಪ್ರತಿನಿಧಿಗಳ ಸಮ್ಮುಖದಲ್ಲಿ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜತೆ ಶನಿವಾರ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿರ್ಧಾರ ಪ್ರಕಟಿಸಿದ ನಂತರ ಧರಣಿ ಹಿಂದಕ್ಕೆ ಪಡೆಯಲಾಯಿತು.</p>.<p>ರೈತ ಸಂಘದ ಪ್ರತಿನಿಧಿಗಳು, ಪುರಸಭೆ ಸದಸ್ಯರು, ಕಂದಾಯ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು:</strong> ಹೋಬಳಿ ಕೇಂದ್ರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ಸಮರ್ಪಕ ಸೇವೆ ನೀಡದೆ ಬೇಜವಾಬ್ದಾರಿ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿದ ರೈತ ಸಂಘ ಮತ್ತು ಹಸಿರು ಸೇನೆಯ ಪದಾಧಿಕಾರಿಗಳು ಮುಖಂಡ ಹಾಳೂರು ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಧರಣಿ ನಡೆಸಿದರು.</p>.<p>ಸ್ಥಳಕ್ಕೆ ಪ್ರಭಾರ ಡಿಎಚ್ಒ ಮುರುಳೀಧರ್, ಟಿಎಚ್ಒ ಅಬ್ದುಲ್ ಖಾದರ್, ವೈದ್ಯಾಧಿಕಾರಿ ಪ್ರಶಾಂತ್, ತಹಶೀಲ್ದಾರ್ ಸಂತೋಷ ಕುಮಾರ್, ಉಪತಹಶೀಲ್ದಾರ್ ಆರ್. ರವಿ ಆಗಮಿಸಿ ಪ್ರತಿಭಟನಕಾರರ ಜತೆ ಸಮಾಲೋಚಿಸಿದರು.</p>.<p>ವೈದ್ಯರ ಬದಲಾವಣೆ, ನರ್ಸ್, ಸ್ಚಚ್ಛತಾ ಸಿಬ್ಬಂದಿ, ಪ್ರಯೋಗಾಲಯ ತಂತ್ರಜ್ಞರು, ಔಷಧ ವಿತರಕರು ಸಮಯಪಾಲನೆ ಮಾಡುತ್ತಿಲ್ಲ. ಎಲ್ಲರ ಬಯೋಮೆಟ್ರಿಕ್ ಹಾಜರಾತಿಯನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕು. ದಾವಣಗೆರೆಗೆ ನಿಯೋಜನೆಯಾಗಿರುವ ಸಿಬ್ಬಂದಿಯನ್ನು ವಾಪಸ್ ಕರೆಸಬೇಕು ಎಂದು ಧರಣಿ ನಿರತರು ಪಟ್ಟು ಹಿಡಿದರು.</p>.<p>ವೈದ್ಯರು ಔಷಧಗಳನ್ನು ಹೊರಗಡೆ ಖರೀದಿಸುವಂತೆ ಚೀಟಿ ಬರೆದುಕೊಡುತ್ತಾರೆ. ಉಗ್ರಾಣದಲ್ಲಿ ದಾಸ್ತಾನು ಇಲ್ಲ ಎಂದು ಆರೋಪಿಸಿದ ಪ್ರತಿಭಟನಕಾರರು ದಾಸ್ತಾನಿನ ಸಮಗ್ರ ದಾಖಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಅಧಿಕಾರಿಗಳು ಕ್ಷ–ಕಿರಣ ವಿಭಾಗ, ವಾರ್ಡ್ಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಯಂತ್ರ ಕೆಟ್ಟಿರುವುದು, ಬೆಡ್ ಶೀಟ್ ಇಲ್ಲದಿರುವುದು ಕಂಡುಬಂದಿದೆ. ನೀವು ಭೇಟಿ ನೀಡುವ ಕಾರಣ ಕುಡಿಯುವ ನೀರಿನ ಘಟಕವನ್ನು ದುರಸ್ತಿ ಮಾಡಿಸಿದ್ದಾರೆ’ ಎಂದು ರೈತರು ಹೇಳಿದರು.</p>.<p>ಕಡರನಾಯ್ಕನಹಳ್ಳಿ ಭಾಗದಲ್ಲಿ ಚರ್ಮದ ತುರಿಕೆ ಕಾಯಿಲೆ ಕಾಣಿಸಿಕೊಂಡಿದೆ. ನದಿ ನೀರಿನ ಪರೀಕ್ಷೆ ಮಾಡಿಸಿ ಸಮಸ್ಯೆ ಪರಿಹರಿಸಲು ಮನವಿ ಮಾಡಿದರು. ಅಧಿಕಾರಿಗಳು ಪರಿಹರಿಸುವ ಭರವಸೆ ನೀಡಿದರು.</p>.<p>ಸ್ಥಳಕ್ಕೆ ಶಾಸಕ ಬಿ.ಪಿ. ಹರೀಶ್ ಆಗಮಿಸಿ, ಧರಣಿ ನಿರತರ ಜತೆ ಸಮಾಲೋಚನೆ ನಡೆಸಿದರು. ಅಧಿಕಾರಿಗಳು ನೀಡಿದ ಉತ್ತರಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಬಿಚ್ಚಿಟ್ಟರು.</p>.<p>‘ಆರೋಗ್ಯ ಇಲಾಖೆಯಲ್ಲಿ ವೈದ್ಯರ ಸಮಸ್ಯೆ, ಔಷಧಿ ಕೊರತೆ ಕುರಿತು ಸದನದಲ್ಲಿ ಚರ್ಚೆ ನಡೆಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಶಾಸಕ ಹರೀಶ್ ಬೇಸರ ವ್ಯಕ್ತಪಡಿಸಿದರು.</p>.<p>ರೈತ ಸಂಘದ ಪ್ರತಿನಿಧಿಗಳ ಸಮ್ಮುಖದಲ್ಲಿ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಜತೆ ಶನಿವಾರ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿರ್ಧಾರ ಪ್ರಕಟಿಸಿದ ನಂತರ ಧರಣಿ ಹಿಂದಕ್ಕೆ ಪಡೆಯಲಾಯಿತು.</p>.<p>ರೈತ ಸಂಘದ ಪ್ರತಿನಿಧಿಗಳು, ಪುರಸಭೆ ಸದಸ್ಯರು, ಕಂದಾಯ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>