<p>ಮಲೇಬೆನ್ನೂರು: ‘ಹಣದಿಂದ ಮಾತ್ರ ಲೌಕಿಕ ಬದುಕು ಸಾಧ್ಯ ಎಂಬ ನಂಬಿಕೆ ಈಚೆಗೆ ಹೆಚ್ಚಾಗುತ್ತಿದೆ’ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೋಡಿ ಆಂಜನೇಯ ದೇವಾಲಯದಲ್ಲಿ ಈಚೆಗೆ ಬಸವ ಜಯಂತ್ಯುತ್ಸವ ಹಾಗೂ ಸಾಮೂಹಿಕ ವಿವಾಹದ ಅಂಗವಾಗಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಹೊಲ, ತೋಟ ಮಾಡುವವರಿಗೆ ಹೆಣ್ಣು ಕೊಡುತ್ತಿಲ್ಲ. ವಧುವಿನ ಬೇಡಿಕೆಗಳ ಪಟ್ಟಿ ಬೆಳೆಯುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದರು.</p>.<p>ಬದುಕಿಗೆ ಶಾಂತಿ, ಸಮಾಧಾನ ಅಗತ್ಯ. ಹಾಗಾಗಿ ಸಾಮರಸ್ಯದ ಬದುಕು ಸಾಗಿಸಿ ಎಂದು ಖಂಡೇರಾಯನಹಳ್ಳಿ ನಾಗಾರಾಜಾನಂದ ಸ್ವಾಮೀಜಿ ಸಲಹೆ ನೀಡಿದರು</p>.<p>ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮುಖಂಡ ಹನಗವಾಡಿ ವೀರೇಶ್ ಮಾತನಾಡಿದರು. ಕಣ್ಣಾಳ್ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.</p>.<p>ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಬಿ.ಎಂ. ವಾಗೀಶ್ ಸ್ವಾಮಿ, ಗಂಗೇನಳ್ಯಪ್ಪ, ಮುದೇಗೌಡ ಬಸವರಾಜಪ್ಪ, ಹನುಮಂತಪ್ಪ ಕಣ್ಣಾಳ್, ನಾಗರಾಜ್. ಕೆ. ಪುರಸಭೆ ಸದಸ್ಯ ಸಾಬೀರ್ ಅಲಿ, ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-43-251294421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ‘ಹಣದಿಂದ ಮಾತ್ರ ಲೌಕಿಕ ಬದುಕು ಸಾಧ್ಯ ಎಂಬ ನಂಬಿಕೆ ಈಚೆಗೆ ಹೆಚ್ಚಾಗುತ್ತಿದೆ’ ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.</p>.<p>ಪಟ್ಟಣದ ಜೋಡಿ ಆಂಜನೇಯ ದೇವಾಲಯದಲ್ಲಿ ಈಚೆಗೆ ಬಸವ ಜಯಂತ್ಯುತ್ಸವ ಹಾಗೂ ಸಾಮೂಹಿಕ ವಿವಾಹದ ಅಂಗವಾಗಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಮಾತನಾಡಿದರು.</p>.<p>ಹೊಲ, ತೋಟ ಮಾಡುವವರಿಗೆ ಹೆಣ್ಣು ಕೊಡುತ್ತಿಲ್ಲ. ವಧುವಿನ ಬೇಡಿಕೆಗಳ ಪಟ್ಟಿ ಬೆಳೆಯುತ್ತಿದೆ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದರು.</p>.<p>ಬದುಕಿಗೆ ಶಾಂತಿ, ಸಮಾಧಾನ ಅಗತ್ಯ. ಹಾಗಾಗಿ ಸಾಮರಸ್ಯದ ಬದುಕು ಸಾಗಿಸಿ ಎಂದು ಖಂಡೇರಾಯನಹಳ್ಳಿ ನಾಗಾರಾಜಾನಂದ ಸ್ವಾಮೀಜಿ ಸಲಹೆ ನೀಡಿದರು</p>.<p>ಶಾಸಕ ಬಿ.ಪಿ. ಹರೀಶ್, ಬಿಜೆಪಿ ಮುಖಂಡ ಹನಗವಾಡಿ ವೀರೇಶ್ ಮಾತನಾಡಿದರು. ಕಣ್ಣಾಳ್ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.</p>.<p>ಪುರಸಭೆ ಪ್ರಭಾರ ಅಧ್ಯಕ್ಷೆ ಅಕ್ಕಮ್ಮ ಭಾನುವಳ್ಳಿ ಸುರೇಶ್, ಬಿ.ಎಂ. ವಾಗೀಶ್ ಸ್ವಾಮಿ, ಗಂಗೇನಳ್ಯಪ್ಪ, ಮುದೇಗೌಡ ಬಸವರಾಜಪ್ಪ, ಹನುಮಂತಪ್ಪ ಕಣ್ಣಾಳ್, ನಾಗರಾಜ್. ಕೆ. ಪುರಸಭೆ ಸದಸ್ಯ ಸಾಬೀರ್ ಅಲಿ, ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-43-251294421</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>