ಬೆಂಗಳೂರಿನ ಬೊಮ್ಮೇನಹಳ್ಳಿಯ ಗೌಗ್ಯಾನ್ ಫೌಂಡೇಷನ್ನಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸಂಜಯ್ ಕುಲಕರ್ಣಿ ಅವರ ದೂರಿನ ಮೇರೆಗೆ ಸಂಘಟನೆಯ ಸದಸ್ಯರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 7 ದನಗಳನ್ನು ವಶಪಡಿಸಿಕೊಂಡಿದ್ದಾರೆ. ‘ಇವುಗಳನ್ನು ವಧೆ ಮಾಡುವ ಉದ್ದೇಶದಿಂದ ಇಟ್ಟುಕೊಂಡಿದ್ದರು’ ಎಂದು ಸಂಜಯ್ ಕುಲಕರ್ಣಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಮಲೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.