<p><strong>ಮಲೇಬೆನ್ನೂರು: ಈಗಿನ</strong> ದಿನಗಳಲ್ಲಿ ಕೃಷಿಕ ಸಮುದಾಯದ ವರನಿಗೆ ಕನ್ಯೆ ನೀಡಲು ಪಾಲಕರು ಹಿಂಜರಿಕೆ ತೋರಬಾರದು ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ಸಲಹೆ ನೀಡಿದರು.</p>.<p>ಪಟ್ಟಣದ ಜೋಡಿ ಆಂಜನೇಯ ಸ್ವಾಮಿ ದೇವಾಲಯದ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿವಾಹದ ಮುಖ್ಯ ಉದ್ದೇಶ ಕೌಟುಂಬಿಕ ವ್ಯವಸ್ಥೆ ಕಾಪಾಡುವುದು. ನಿಮ್ಮ ಮಕ್ಕಳಿಗೆ ಸಂಸ್ಕಾರ ನೀಡಿ’ ಎಂದು ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಅಡಿಯಿಟ್ಟ ಜೋಡಿಗಳಿಗೆ ಅವರು ಸೂಚಿಸಿದರು.</p>.<p>ನವಜೋಡಿಗಳು ಸರಳ ಕಾಯಕ ಜೀವನ ನಡೆಸಿ, ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಬಸವಮೂರ್ತಿ ಗುಂಡಯ್ಯ ಸ್ವಾಮೀಜಿ ಹೇಳಿದರು. </p>.<p>ಜನಜಾಗೃತಿ ಸಮಿತಿ ಸದಸ್ಯ ಪಟೇಲ್ ಮಂಜುನಾಥ್, ಬಿಜೆಪಿ ಮುಖಂಡ ಹನಗವಾಡಿ ವೀರೇಶ್, ಕಾಂಗ್ರೆಸ್ ಮುಖಂಡ ಬಿ.ಎಂ. ವಾಗೀಶ್ ಸ್ವಾಮಿ, ವೀರಯ್ಯ ಸ್ವಾಮಿ ಮಾತನಾಡಿದರು.</p>.<p>ಗೋದೂಳಿ ಸಮಯದಲ್ಲಿ ಆಂಜನೇಯ ಸ್ವಾಮಿ ಹೂವಿನ ರಥದ ಉತ್ಸವ, ಜೋಡೆತ್ತಿನ ಮೆರವಣಿಗೆ ಜರುಗಿತು. </p>.<p>ಐರಣಿ ಅಣ್ಣೇಶ್, ಪುರಸಭೆ ಸದಸ್ಯರಾದ ಸಾಬೀರ್ ಅಲಿ, ಮಂಜುನಾಥ್, ಬೋವಿ ಕುಮಾರ್ ಇದ್ದರು. ಕಣ್ಣಾಳ್ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ದಂಡಿ ತಿಪ್ಪೇಸ್ವಾಮಿ ಸ್ವಾಗತಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: ಈಗಿನ</strong> ದಿನಗಳಲ್ಲಿ ಕೃಷಿಕ ಸಮುದಾಯದ ವರನಿಗೆ ಕನ್ಯೆ ನೀಡಲು ಪಾಲಕರು ಹಿಂಜರಿಕೆ ತೋರಬಾರದು ಎಂದು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ಸಲಹೆ ನೀಡಿದರು.</p>.<p>ಪಟ್ಟಣದ ಜೋಡಿ ಆಂಜನೇಯ ಸ್ವಾಮಿ ದೇವಾಲಯದ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿವಾಹದ ಮುಖ್ಯ ಉದ್ದೇಶ ಕೌಟುಂಬಿಕ ವ್ಯವಸ್ಥೆ ಕಾಪಾಡುವುದು. ನಿಮ್ಮ ಮಕ್ಕಳಿಗೆ ಸಂಸ್ಕಾರ ನೀಡಿ’ ಎಂದು ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಅಡಿಯಿಟ್ಟ ಜೋಡಿಗಳಿಗೆ ಅವರು ಸೂಚಿಸಿದರು.</p>.<p>ನವಜೋಡಿಗಳು ಸರಳ ಕಾಯಕ ಜೀವನ ನಡೆಸಿ, ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದು ಬಸವಮೂರ್ತಿ ಗುಂಡಯ್ಯ ಸ್ವಾಮೀಜಿ ಹೇಳಿದರು. </p>.<p>ಜನಜಾಗೃತಿ ಸಮಿತಿ ಸದಸ್ಯ ಪಟೇಲ್ ಮಂಜುನಾಥ್, ಬಿಜೆಪಿ ಮುಖಂಡ ಹನಗವಾಡಿ ವೀರೇಶ್, ಕಾಂಗ್ರೆಸ್ ಮುಖಂಡ ಬಿ.ಎಂ. ವಾಗೀಶ್ ಸ್ವಾಮಿ, ವೀರಯ್ಯ ಸ್ವಾಮಿ ಮಾತನಾಡಿದರು.</p>.<p>ಗೋದೂಳಿ ಸಮಯದಲ್ಲಿ ಆಂಜನೇಯ ಸ್ವಾಮಿ ಹೂವಿನ ರಥದ ಉತ್ಸವ, ಜೋಡೆತ್ತಿನ ಮೆರವಣಿಗೆ ಜರುಗಿತು. </p>.<p>ಐರಣಿ ಅಣ್ಣೇಶ್, ಪುರಸಭೆ ಸದಸ್ಯರಾದ ಸಾಬೀರ್ ಅಲಿ, ಮಂಜುನಾಥ್, ಬೋವಿ ಕುಮಾರ್ ಇದ್ದರು. ಕಣ್ಣಾಳ್ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ದಂಡಿ ತಿಪ್ಪೇಸ್ವಾಮಿ ಸ್ವಾಗತಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>