<p><strong>ಮಲೇಬೆನ್ನೂರು</strong>: ಹೋಬಳಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಜ್ಯ ಹೆದ್ದಾರಿ-25ರಲ್ಲಿ ರಸ್ತೆ ದುರಸ್ತಿ ಕಾರ್ಯಭಾನುವಾರ ಆರಂಭವಾಗಿದೆ.</p>.<p>ಈ ಬಾರಿಯ ಮಳೆ ಆರ್ಭಟಕ್ಕೆ ಬಹುತೇಕ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದವು. ಇದರಿಂದ ಸಂಚಾರ ಕಷ್ಟವಾಗಿದ್ದು, ಸವಾರರು ತೊಂದರೆ ಎದುರಿಸುವಂತಾಗಿದೆ.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಒಳನಾಡಿ ಬಂದರು ಇಲಾಖೆಯಿಂದ ದುರಸ್ತಿ ಕಾರ್ಯ ಕೈಗೊಂಡಿದ್ದು, ನಾಗರಿಕರು ಹರ್ಷ ವ್ಯಕ್ತಪಡಿಸಿದರು.</p>.<p>‘ಮೊದಲು ಗುಂಡಿಗಳನ್ನು ಮುಚ್ಚಲಾಗುವುದು. ನಂತರ ಹಾಳಾಗಿರುವ 350 ಮೀ. ಡಾಂಬರ್ ಹಾಕಲಾಗುವುದು’ ಎಂದುಗುತ್ತಿಗೆದಾರ ಬಿ.ಎಂ.ಜಗದೀಶ್ವರ ಸ್ವಾಮಿ ತಿಳಿಸಿದರು.</p>.<p>ರಾಜ್ಯ ಹೆದ್ದಾರಿ ದುರಸ್ತಿಗೆ, ಪುನರ್ ನಿರ್ಮಾಣಕ್ಕೆ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಸದ್ಯ ಮಂಜೂರಾತಿ ಸಿಕ್ಕಿರುವ ಸುಮಾರು 4 ಕಿ.ಮೀ. ನಂದಿತಾವರೆಯಿಂದ ಕುಂಬಳೂರುವರೆಗೆ ರಸ್ತೆ ವಿಸ್ತರಿಸಿ ಡಾಂಬರ್ ರಸ್ತೆ ನಿರ್ಮಿಸಲಾಗುವುದು ಎಂದು ಎಂಜಿನಿಯರ್ ಶಿವರುದ್ರಪ್ಪ ಮಾಹಿತಿ ನೀಡಿದರು.</p>.<p>ಕೊಮಾರನಹಳ್ಳಿ ಗುಡ್ಡ ಪ್ರದೇಶದ ರಾಮನಕಟ್ಟೆ ಪ್ರದೇಶದಲ್ಲಿ 6 ತಿರುವುಗಳಲ್ಲಿ ಗುಂಡಿ ಬಿದ್ದಿದ್ದು, ದುರಸ್ತಿ ಮಾಡುವಂತೆ ಸ್ಥಳೀಯರು ಮನವಿ ಮಾಡಿದರು.</p>.<p>'ರಾಜ್ಯ ಹೆದ್ದಾರಿ-25ಕ್ಕೆ ತೇಪೆ ಹಾಕುವ ಬದಲಿಗೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಹಾಗೂ ಹರಿಹರ ಶಿವಮೊಗ್ಗ ರೈಲು ಮಾರ್ಗ ಮಹತ್ವಾಕಾಂಕ್ಷಿ ಯೋಜನೆ ನನೆಗುದಿಗೆ ಬಿದ್ದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಶಾಸಕರು, ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು'ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬಿದ್ ಅಲಿ,ಎಪಿಎಂಸಿ ಮಾಜಿ ಅಧ್ಯಕ್ಷ ಪಟೇಲ್ ಮಂಜುನಾಥ್ ಕೋಮಾರನಹಳ್ಳಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>: ಹೋಬಳಿ ವ್ಯಾಪ್ತಿಯಲ್ಲಿ ಹಾದುಹೋಗಿರುವ ರಾಜ್ಯ ಹೆದ್ದಾರಿ-25ರಲ್ಲಿ ರಸ್ತೆ ದುರಸ್ತಿ ಕಾರ್ಯಭಾನುವಾರ ಆರಂಭವಾಗಿದೆ.</p>.<p>ಈ ಬಾರಿಯ ಮಳೆ ಆರ್ಭಟಕ್ಕೆ ಬಹುತೇಕ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದವು. ಇದರಿಂದ ಸಂಚಾರ ಕಷ್ಟವಾಗಿದ್ದು, ಸವಾರರು ತೊಂದರೆ ಎದುರಿಸುವಂತಾಗಿದೆ.</p>.<p>ಲೋಕೋಪಯೋಗಿ ಇಲಾಖೆ ಹಾಗೂ ಒಳನಾಡಿ ಬಂದರು ಇಲಾಖೆಯಿಂದ ದುರಸ್ತಿ ಕಾರ್ಯ ಕೈಗೊಂಡಿದ್ದು, ನಾಗರಿಕರು ಹರ್ಷ ವ್ಯಕ್ತಪಡಿಸಿದರು.</p>.<p>‘ಮೊದಲು ಗುಂಡಿಗಳನ್ನು ಮುಚ್ಚಲಾಗುವುದು. ನಂತರ ಹಾಳಾಗಿರುವ 350 ಮೀ. ಡಾಂಬರ್ ಹಾಕಲಾಗುವುದು’ ಎಂದುಗುತ್ತಿಗೆದಾರ ಬಿ.ಎಂ.ಜಗದೀಶ್ವರ ಸ್ವಾಮಿ ತಿಳಿಸಿದರು.</p>.<p>ರಾಜ್ಯ ಹೆದ್ದಾರಿ ದುರಸ್ತಿಗೆ, ಪುನರ್ ನಿರ್ಮಾಣಕ್ಕೆ ಅಂದಾಜು ಪಟ್ಟಿ ಸಲ್ಲಿಸಲಾಗಿದೆ. ಸದ್ಯ ಮಂಜೂರಾತಿ ಸಿಕ್ಕಿರುವ ಸುಮಾರು 4 ಕಿ.ಮೀ. ನಂದಿತಾವರೆಯಿಂದ ಕುಂಬಳೂರುವರೆಗೆ ರಸ್ತೆ ವಿಸ್ತರಿಸಿ ಡಾಂಬರ್ ರಸ್ತೆ ನಿರ್ಮಿಸಲಾಗುವುದು ಎಂದು ಎಂಜಿನಿಯರ್ ಶಿವರುದ್ರಪ್ಪ ಮಾಹಿತಿ ನೀಡಿದರು.</p>.<p>ಕೊಮಾರನಹಳ್ಳಿ ಗುಡ್ಡ ಪ್ರದೇಶದ ರಾಮನಕಟ್ಟೆ ಪ್ರದೇಶದಲ್ಲಿ 6 ತಿರುವುಗಳಲ್ಲಿ ಗುಂಡಿ ಬಿದ್ದಿದ್ದು, ದುರಸ್ತಿ ಮಾಡುವಂತೆ ಸ್ಥಳೀಯರು ಮನವಿ ಮಾಡಿದರು.</p>.<p>'ರಾಜ್ಯ ಹೆದ್ದಾರಿ-25ಕ್ಕೆ ತೇಪೆ ಹಾಕುವ ಬದಲಿಗೆ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೆ ಏರಿಸುವ ಹಾಗೂ ಹರಿಹರ ಶಿವಮೊಗ್ಗ ರೈಲು ಮಾರ್ಗ ಮಹತ್ವಾಕಾಂಕ್ಷಿ ಯೋಜನೆ ನನೆಗುದಿಗೆ ಬಿದ್ದಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಬಿಜೆಪಿ ಶಾಸಕರು, ಸಂಸದರು ಕೇಂದ್ರದ ಮೇಲೆ ಒತ್ತಡ ಹೇರಬೇಕು'ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬಿದ್ ಅಲಿ,ಎಪಿಎಂಸಿ ಮಾಜಿ ಅಧ್ಯಕ್ಷ ಪಟೇಲ್ ಮಂಜುನಾಥ್ ಕೋಮಾರನಹಳ್ಳಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>