<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಬಿರು ಮಳೆಗೆ ತಗ್ಗು ಪ್ರದೇಶದ ಭತ್ತದ ಬೆಳೆ ಜಲಾವೃತವಾಗಿದೆ.</p>.<p>ಕುಣಿಬೆಳೆಕೆರೆ, ಜಿಗಳಿ ಹೊರ ವಲಯದ ಯಲವಟ್ಟಿ ರಸ್ತೆ ಅಕ್ಕಪಕ್ಕದ ಜಮೀನುಗಳು, ಆದಾಪುರ, ನಿಟ್ಟೂರು, ಸಂಕ್ಲೀಪುರ, ಗುಳದಹಳ್ಳಿ, ಭಾಗದಲ್ಲಿ ನೂರಾರು ಎಕರೆ ಭತ್ತ ಜಲಾವೃತವಾಗಿದೆ. ಕೆಲವು ಕಡೆ ಕಾಳು ಕಟ್ಟುವ ಹಂತದಲ್ಲಿದ್ದರೆ, ಕೆಲವೆಡೆ ಕಾಳು ಕಟ್ಟಿರುವ ಭತ್ತ ತುಂಡಾಗಿ ನೆಲದ ಪಾಲಾಗಿವೆ.</p>.<p>ಕಟಾವು ಮಾಡಿದ ಕಣದಲ್ಲಿ ಭತ್ತದ ರಾಶಿಗೆ ನೀರು ನುಗ್ಗಿ ಕೆಳಭಾಗ ನೆನೆದು ತೊಪ್ಪೆಯಾಗಿದೆ. ಮೋಡ ಮುಸುಕಿದ ವಾತಾವರಣದ ಕಾರಣ ಸೂರ್ಯನ ದರ್ಶನ ಇಲ್ಲದೇ ಭತ್ತವನ್ನು ಒಣಗಿಸುವುದು ಕಷ್ಟವಾಗಿದೆ. ಭತ್ತ ಕಾವು ಬಂದು ಮೊಳಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದರು.</p>.<p>ತೇವಾಂಶ ಹೆಚ್ಚಾಗಿರುವ ಕಾರಣ ಭತ್ತದ ವ್ಯಾಪಾರ ಕುಂಠಿತವಾಗಿದೆ. ಸ್ಥಳೀಯ ಹಾಗೂ ಹೊರಭಾಗದ ವ್ಯಾಪಾರಿಗಳು ಖರೀದಿಗೆ ಮುಂದೆ ಬರುತ್ತಿಲ್ಲ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ, ಇದರಿಂದ ಭತ್ತದ ಒಕ್ಕಲು ಮುಂದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-20361129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಬಿರು ಮಳೆಗೆ ತಗ್ಗು ಪ್ರದೇಶದ ಭತ್ತದ ಬೆಳೆ ಜಲಾವೃತವಾಗಿದೆ.</p>.<p>ಕುಣಿಬೆಳೆಕೆರೆ, ಜಿಗಳಿ ಹೊರ ವಲಯದ ಯಲವಟ್ಟಿ ರಸ್ತೆ ಅಕ್ಕಪಕ್ಕದ ಜಮೀನುಗಳು, ಆದಾಪುರ, ನಿಟ್ಟೂರು, ಸಂಕ್ಲೀಪುರ, ಗುಳದಹಳ್ಳಿ, ಭಾಗದಲ್ಲಿ ನೂರಾರು ಎಕರೆ ಭತ್ತ ಜಲಾವೃತವಾಗಿದೆ. ಕೆಲವು ಕಡೆ ಕಾಳು ಕಟ್ಟುವ ಹಂತದಲ್ಲಿದ್ದರೆ, ಕೆಲವೆಡೆ ಕಾಳು ಕಟ್ಟಿರುವ ಭತ್ತ ತುಂಡಾಗಿ ನೆಲದ ಪಾಲಾಗಿವೆ.</p>.<p>ಕಟಾವು ಮಾಡಿದ ಕಣದಲ್ಲಿ ಭತ್ತದ ರಾಶಿಗೆ ನೀರು ನುಗ್ಗಿ ಕೆಳಭಾಗ ನೆನೆದು ತೊಪ್ಪೆಯಾಗಿದೆ. ಮೋಡ ಮುಸುಕಿದ ವಾತಾವರಣದ ಕಾರಣ ಸೂರ್ಯನ ದರ್ಶನ ಇಲ್ಲದೇ ಭತ್ತವನ್ನು ಒಣಗಿಸುವುದು ಕಷ್ಟವಾಗಿದೆ. ಭತ್ತ ಕಾವು ಬಂದು ಮೊಳಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದರು.</p>.<p>ತೇವಾಂಶ ಹೆಚ್ಚಾಗಿರುವ ಕಾರಣ ಭತ್ತದ ವ್ಯಾಪಾರ ಕುಂಠಿತವಾಗಿದೆ. ಸ್ಥಳೀಯ ಹಾಗೂ ಹೊರಭಾಗದ ವ್ಯಾಪಾರಿಗಳು ಖರೀದಿಗೆ ಮುಂದೆ ಬರುತ್ತಿಲ್ಲ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ, ಇದರಿಂದ ಭತ್ತದ ಒಕ್ಕಲು ಮುಂದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-43-20361129</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>