<p><strong>ಮಲೇಬೆನ್ನೂರು</strong>: ಪಟ್ಟಣದ ಈಶ್ವರೀಯ ವಿ.ವಿ. ಆಶ್ರಯದಲ್ಲಿ ಫೆ. 15ರಂದು ಬೆಳಿಗ್ಗೆ 9ಕ್ಕೆ ಮಹಾಶಿವರಾತ್ರಿ ಪ್ರಯುಕ್ತ 90 ಶಿವಲಿಂಗ ಹಾಗೂ ಕಳಸಹೊತ್ತ ಮಹಿಳೆಯರಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿದೆ ಎಂದು ಬ್ರಹ್ಮಕುಮಾರಿ ಶಾಂತಕ್ಕ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಉದ್ಯಮಿ ಚಿದಾನಂದಪ್ಪ ಅವರು ವಿ.ವಿ. ಸಭಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ವೈದ್ಯ ಹನುಮಂತಪ್ಪ, ಪಿಎಸ್ಐ ಹಾರೂನ್ ಅಖ್ತರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.</p>.<p>ಶಿವಲಿಂಗ ಸಾಲಿಗ್ರಾಮಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಉತ್ಸವಕ್ಕೆ ಚಾಲನ ನೀಡಲಾಗುವುದು. ಬ್ರಹ್ಮಕುಮಾರಿ ಲೀಲಕ್ಕ, ಗಂಗಾಂಬಿಕಾ ಉಪನ್ಯಾಸ ನೀಡಲಿದ್ದಾರೆ ಎಂದರು.</p>.<p>ಹೊಳಸಿರಿಗೆರೆ ಕೇಂದ್ರದಲ್ಲಿ ಫ. 16ರಂದು ಶಿವರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ವಸಂತ್ ದೇವಾಡಿಗ, ಎನ್. ಜಿ. ನಾಗನಗೌಡ ನೇತೃತ್ವದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸುವಂತೆ ಮನವಿ ಮಾಡಿದರು.</p>.<p>ಬಿ.ಕೆ. ರುದ್ರಯ್ಯ, ಪಂಚಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>: ಪಟ್ಟಣದ ಈಶ್ವರೀಯ ವಿ.ವಿ. ಆಶ್ರಯದಲ್ಲಿ ಫೆ. 15ರಂದು ಬೆಳಿಗ್ಗೆ 9ಕ್ಕೆ ಮಹಾಶಿವರಾತ್ರಿ ಪ್ರಯುಕ್ತ 90 ಶಿವಲಿಂಗ ಹಾಗೂ ಕಳಸಹೊತ್ತ ಮಹಿಳೆಯರಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿದೆ ಎಂದು ಬ್ರಹ್ಮಕುಮಾರಿ ಶಾಂತಕ್ಕ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಉದ್ಯಮಿ ಚಿದಾನಂದಪ್ಪ ಅವರು ವಿ.ವಿ. ಸಭಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ವೈದ್ಯ ಹನುಮಂತಪ್ಪ, ಪಿಎಸ್ಐ ಹಾರೂನ್ ಅಖ್ತರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಸ್ಯರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.</p>.<p>ಶಿವಲಿಂಗ ಸಾಲಿಗ್ರಾಮಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಉತ್ಸವಕ್ಕೆ ಚಾಲನ ನೀಡಲಾಗುವುದು. ಬ್ರಹ್ಮಕುಮಾರಿ ಲೀಲಕ್ಕ, ಗಂಗಾಂಬಿಕಾ ಉಪನ್ಯಾಸ ನೀಡಲಿದ್ದಾರೆ ಎಂದರು.</p>.<p>ಹೊಳಸಿರಿಗೆರೆ ಕೇಂದ್ರದಲ್ಲಿ ಫ. 16ರಂದು ಶಿವರಾತ್ರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ವಸಂತ್ ದೇವಾಡಿಗ, ಎನ್. ಜಿ. ನಾಗನಗೌಡ ನೇತೃತ್ವದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸುವಂತೆ ಮನವಿ ಮಾಡಿದರು.</p>.<p>ಬಿ.ಕೆ. ರುದ್ರಯ್ಯ, ಪಂಚಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>