<p><strong>ಮಲೇಬೆನ್ನೂರು</strong>: ‘ಹೊಲದಲ್ಲಿ ಕೆಲಸ ಮಾಡುವ ರೈತ ಹಾಗೂ ಗಡಿ ಕಾಯುವ ಯೋಧರಂತೆ ಕೆಲಸ ಮಾಡಿದರೆ ಭಗವಂತನ ಅನುಗ್ರಹ ಪ್ರಾಪ್ತಿ ನಿಶ್ಚಿತʼ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ದೇವರಬೆಳಕೆರೆ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಲಿಂಗೋಧ್ಭವ ಮೂರ್ತಿ ಪ್ರತಿಷ್ಠಾಪನೆ, ಶಿವದೀಕ್ಷೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.</p>.<p>‘ಜಂಗಮರಿಗೆ ಒಡವೆ, ವಸ್ತು ಶೋಭಾಯಮಾನವಲ್ಲ. ಧರ್ಮಧಿಕಾರಿಯಾಗಲು ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ಸನಾತನ ಜ್ಯೋತಿಯು ಮನದೊಳಗಿನ ಅಂಧಕಾರ ದೂರ ಮಾಡುತ್ತದೆ’ ಎಂದರು.</p>.<p>ಬುಕ್ಕಸಾಗರದ ಕರಿಸಿದ್ದೇಶ್ವರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಕರಿಬಸಪ್ಪ, ಗುರುಸ್ವಾಮಿ, ಕರಿಸಿದ್ದಯ್ಯ ಮಾತನಾಡಿದರು.</p>.<p>ಸುಭಾಶ್ಚಂದ್ರ ಶಾಸ್ತ್ರಿ, ರೇವಣಸಿದ್ದಯ್ಯ ಧಾರ್ಮಿಕ ವಿಧಿ ನೇತೃತ್ವ ವಹಿಸಿದ್ದರು. 35 ವಟುಗಳಿಗೆ ಜಂಗಮ ದೀಕ್ಷೆ ನೀಡಲಾಯಿತು.</p>.<p>ಗ್ರಾಮದ ದೇವತೆಗಳಾದ ಮೈಲಾರಲಿಂಗೇಶ್ವರ, ಬಸವೇಶ್ವರ ಹಾಗೂ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಜೊತೆ ವಿಶ್ವಾರಾಧ್ಯ ಮೂರ್ತಿ ಮೆರವಣಿಗೆ ಹಾಗೂ ಅನ್ನ ಸಂತರ್ಪಣೆ ಜರುಗಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>: ‘ಹೊಲದಲ್ಲಿ ಕೆಲಸ ಮಾಡುವ ರೈತ ಹಾಗೂ ಗಡಿ ಕಾಯುವ ಯೋಧರಂತೆ ಕೆಲಸ ಮಾಡಿದರೆ ಭಗವಂತನ ಅನುಗ್ರಹ ಪ್ರಾಪ್ತಿ ನಿಶ್ಚಿತʼ ಎಂದು ಆವರಗೊಳ್ಳ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಸಮೀಪದ ದೇವರಬೆಳಕೆರೆ ಗ್ರಾಮದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಲಿಂಗೋಧ್ಭವ ಮೂರ್ತಿ ಪ್ರತಿಷ್ಠಾಪನೆ, ಶಿವದೀಕ್ಷೆ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.</p>.<p>‘ಜಂಗಮರಿಗೆ ಒಡವೆ, ವಸ್ತು ಶೋಭಾಯಮಾನವಲ್ಲ. ಧರ್ಮಧಿಕಾರಿಯಾಗಲು ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು. ಸನಾತನ ಜ್ಯೋತಿಯು ಮನದೊಳಗಿನ ಅಂಧಕಾರ ದೂರ ಮಾಡುತ್ತದೆ’ ಎಂದರು.</p>.<p>ಬುಕ್ಕಸಾಗರದ ಕರಿಸಿದ್ದೇಶ್ವರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಕರಿಬಸಪ್ಪ, ಗುರುಸ್ವಾಮಿ, ಕರಿಸಿದ್ದಯ್ಯ ಮಾತನಾಡಿದರು.</p>.<p>ಸುಭಾಶ್ಚಂದ್ರ ಶಾಸ್ತ್ರಿ, ರೇವಣಸಿದ್ದಯ್ಯ ಧಾರ್ಮಿಕ ವಿಧಿ ನೇತೃತ್ವ ವಹಿಸಿದ್ದರು. 35 ವಟುಗಳಿಗೆ ಜಂಗಮ ದೀಕ್ಷೆ ನೀಡಲಾಯಿತು.</p>.<p>ಗ್ರಾಮದ ದೇವತೆಗಳಾದ ಮೈಲಾರಲಿಂಗೇಶ್ವರ, ಬಸವೇಶ್ವರ ಹಾಗೂ ಚೌಡೇಶ್ವರಿ ದೇವಿ ಉತ್ಸವ ಮೂರ್ತಿ ಜೊತೆ ವಿಶ್ವಾರಾಧ್ಯ ಮೂರ್ತಿ ಮೆರವಣಿಗೆ ಹಾಗೂ ಅನ್ನ ಸಂತರ್ಪಣೆ ಜರುಗಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>