<p>ಮಲೇಬೆನ್ನೂರು: ‘ಆರೋಗ್ಯ ಹದಗೆಟ್ಟಾಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಿರಿ. ನಕಲಿ ನಾಟಿ ವೈದ್ಯರಿಂದ ಜನ ಆದಷ್ಟು ದೂರವಿರಬೇಕು’ ಎಂದು ಡಾ. ನವ್ಯಾ ಎಂ.ಆರ್. ಮನವಿ ಮಾಡಿದರು.</p>.<p>ಸಮೀಪದ ದೇವರ ಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ನಡೆದ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಲೇರಿಯಾ ಅಥವಾ ಯಾವುದೇ ತರಹರ ವೈರಾಣು ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೇ ಆಗಮಿಸಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.</p>.<p>ಚಳಿ, ಜ್ವರ ಕಂಡು ಬಂದರೆ ರಕ್ತ ಪರೀಕ್ಷೆ ಅಗತ್ಯ. ರಕ್ತ ಪರೀಕ್ಷೆಯಲ್ಲಿ ಮಲೇರಿಯಾ ವೈರಾಣು ಕಂಡು ಬಂದರೆ ಮಾತ್ರ ಚಿಕಿತ್ಸೆ ನೀಡುತ್ತಾರೆ ಎಂದು ತಿಳಿಸಿದರು.</p>.<p>ಸೊಳ್ಳೆ ಅತ್ಯಂತ ಅಪಾಯಕಾರಿಯಾಗಿದ್ದು, ಅದರಿಂದ ಪಾರಾಗಲು ಮುಖ್ಯವಾಗಿ ಪರಿಸರ ಸಂರಕ್ಷಣೆಗೆ ಗಮನ ಹರಿಸಬೇಕು. ಮನೆಯ ಸುತ್ತಮತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ ಸಲಹೆ ನೀಡಿದರು.</p>.<p>ತಾಲ್ಲೂಕು ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್ ಮಾತನಾಡಿದರು.</p>.<p>ಆರೋಗ್ಯ ಸುರಕ್ಷಾಧಿಕಾರಿ ನಯನ ರೆಡ್ಡಿ, ಲಕ್ಷ್ಮಿ, ಆರೋಗ್ಯ ನಿರೀಕ್ಷಣಾಧಿಕಾರಿ ಆದರ್ಶ, ರೇಖಾ, ಸಮುದಾಯ ಆರೋಗ್ಯ ಅಧಿಕಾರಿ ಮಹಮ್ಮದ್ ಇಮ್ರಾನ್. ಅಕ್ಷತಾ, ಪೂಜಾ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-43-96439404</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ‘ಆರೋಗ್ಯ ಹದಗೆಟ್ಟಾಗ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಿರಿ. ನಕಲಿ ನಾಟಿ ವೈದ್ಯರಿಂದ ಜನ ಆದಷ್ಟು ದೂರವಿರಬೇಕು’ ಎಂದು ಡಾ. ನವ್ಯಾ ಎಂ.ಆರ್. ಮನವಿ ಮಾಡಿದರು.</p>.<p>ಸಮೀಪದ ದೇವರ ಬೆಳಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಮಲೇರಿಯಾ ದಿನದ ಅಂಗವಾಗಿ ನಡೆದ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಲೇರಿಯಾ ಅಥವಾ ಯಾವುದೇ ತರಹರ ವೈರಾಣು ಜ್ವರಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಬಾಗಿಲಿಗೇ ಆಗಮಿಸಿ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.</p>.<p>ಚಳಿ, ಜ್ವರ ಕಂಡು ಬಂದರೆ ರಕ್ತ ಪರೀಕ್ಷೆ ಅಗತ್ಯ. ರಕ್ತ ಪರೀಕ್ಷೆಯಲ್ಲಿ ಮಲೇರಿಯಾ ವೈರಾಣು ಕಂಡು ಬಂದರೆ ಮಾತ್ರ ಚಿಕಿತ್ಸೆ ನೀಡುತ್ತಾರೆ ಎಂದು ತಿಳಿಸಿದರು.</p>.<p>ಸೊಳ್ಳೆ ಅತ್ಯಂತ ಅಪಾಯಕಾರಿಯಾಗಿದ್ದು, ಅದರಿಂದ ಪಾರಾಗಲು ಮುಖ್ಯವಾಗಿ ಪರಿಸರ ಸಂರಕ್ಷಣೆಗೆ ಗಮನ ಹರಿಸಬೇಕು. ಮನೆಯ ಸುತ್ತಮತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ ಸಲಹೆ ನೀಡಿದರು.</p>.<p>ತಾಲ್ಲೂಕು ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್ ಮಾತನಾಡಿದರು.</p>.<p>ಆರೋಗ್ಯ ಸುರಕ್ಷಾಧಿಕಾರಿ ನಯನ ರೆಡ್ಡಿ, ಲಕ್ಷ್ಮಿ, ಆರೋಗ್ಯ ನಿರೀಕ್ಷಣಾಧಿಕಾರಿ ಆದರ್ಶ, ರೇಖಾ, ಸಮುದಾಯ ಆರೋಗ್ಯ ಅಧಿಕಾರಿ ಮಹಮ್ಮದ್ ಇಮ್ರಾನ್. ಅಕ್ಷತಾ, ಪೂಜಾ, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-43-96439404</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>