<p><strong>ದಾವಣಗೆರೆ:</strong> ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯ ಮಳಲಹಳ್ಳಿ ಗ್ರಾಮದಲ್ಲಿ ನಿಷೇಧಿತ ತಳಿಯಾದ ಆಫ್ರಿಕನ್ ಕ್ಯಾಟ್ಫಿಶ್ ನಾಶ ಮಾಡುವ ಪ್ರಕ್ರಿಯೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ನೇತೃತ್ವದಲ್ಲಿ ಆರಂಭವಾಯಿತು.</p>.<p>ಗ್ರಾಮದ ಗೌರಮ್ಮ ಹಾಗೂ ರಾಮನಗೌಡ ಅವರಿಗೆ ಸೇರಿದ ಸರ್ವೆ ನಂ 19 ಮತ್ತು 21/1ರಲ್ಲಿ 10.37 ಎಕರೆ ಜಮೀನಿನಲ್ಲಿ ಪ್ರದೇಶದಲ್ಲಿ 8 ಕೆರೆಗಳಲ್ಲಿ ಮೀನನ್ನು ಸಾಕಣೆ ಮಾಡಿದ್ದು, ಅವುಗಳನ್ನು ಗುತ್ತಿಗೆದಾರರೊಬ್ಬರಿಗೆ ನೀಡಲಾಗಿತ್ತು.</p>.<p>ಮೀನುಗಾರಿಕೆ ಇಲಾಖೆಯ ದೂರಿನ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ಆರಂಭಿಸಲಾಗಿದೆ. ಮೂರು ದಿನಗಳಲ್ಲಿ ಕಾರ್ಯಾಚರಣೆ ಮುಗಿಯುತ್ತದೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಉಪವಿಭಾಗಾಧಿಕಾರಿ ಮಾಹಿತಿ ನೀಡಿದರು.</p>.<p>ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ಮೀನುಗಾರಿಕೆ ಅಧಿಕಾರಿ ಗಣೇಶ್ ಇದ್ದರು.</p>.<p class="Subhead"><strong>ಕ್ಯಾಟ್ಫಿಶ್ ನಿಷೇಧ ಏಕೆ?</strong></p>.<p>ಪರಿಸರ ಹಾಗೂ ಮನುಷ್ಯರ ಆರೋಗ್ಯಕ್ಕೆ ಮಾರಕ ಎನ್ನುವ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ನಿಷೇಧಿಸಿದೆ. ಭಾರತದಲ್ಲಿ ಕ್ಯಾಟ್ಫಿಶ್ ಸಾಗಣೆ ಹಾಗೂ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಕರ್ನಾಟಕದಲ್ಲಿಯೂ 2013ರಲ್ಲಿ ಈ ಮೀನಿಗೆ ಸರ್ಕಾರ ನಿಷೇಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯ ಮಳಲಹಳ್ಳಿ ಗ್ರಾಮದಲ್ಲಿ ನಿಷೇಧಿತ ತಳಿಯಾದ ಆಫ್ರಿಕನ್ ಕ್ಯಾಟ್ಫಿಶ್ ನಾಶ ಮಾಡುವ ಪ್ರಕ್ರಿಯೆ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ನೇತೃತ್ವದಲ್ಲಿ ಆರಂಭವಾಯಿತು.</p>.<p>ಗ್ರಾಮದ ಗೌರಮ್ಮ ಹಾಗೂ ರಾಮನಗೌಡ ಅವರಿಗೆ ಸೇರಿದ ಸರ್ವೆ ನಂ 19 ಮತ್ತು 21/1ರಲ್ಲಿ 10.37 ಎಕರೆ ಜಮೀನಿನಲ್ಲಿ ಪ್ರದೇಶದಲ್ಲಿ 8 ಕೆರೆಗಳಲ್ಲಿ ಮೀನನ್ನು ಸಾಕಣೆ ಮಾಡಿದ್ದು, ಅವುಗಳನ್ನು ಗುತ್ತಿಗೆದಾರರೊಬ್ಬರಿಗೆ ನೀಡಲಾಗಿತ್ತು.</p>.<p>ಮೀನುಗಾರಿಕೆ ಇಲಾಖೆಯ ದೂರಿನ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ಆರಂಭಿಸಲಾಗಿದೆ. ಮೂರು ದಿನಗಳಲ್ಲಿ ಕಾರ್ಯಾಚರಣೆ ಮುಗಿಯುತ್ತದೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಉಪವಿಭಾಗಾಧಿಕಾರಿ ಮಾಹಿತಿ ನೀಡಿದರು.</p>.<p>ಹರಿಹರ ತಹಶೀಲ್ದಾರ್ ರಾಮಚಂದ್ರಪ್ಪ, ಮೀನುಗಾರಿಕೆ ಅಧಿಕಾರಿ ಗಣೇಶ್ ಇದ್ದರು.</p>.<p class="Subhead"><strong>ಕ್ಯಾಟ್ಫಿಶ್ ನಿಷೇಧ ಏಕೆ?</strong></p>.<p>ಪರಿಸರ ಹಾಗೂ ಮನುಷ್ಯರ ಆರೋಗ್ಯಕ್ಕೆ ಮಾರಕ ಎನ್ನುವ ಕಾರಣಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ನಿಷೇಧಿಸಿದೆ. ಭಾರತದಲ್ಲಿ ಕ್ಯಾಟ್ಫಿಶ್ ಸಾಗಣೆ ಹಾಗೂ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಕರ್ನಾಟಕದಲ್ಲಿಯೂ 2013ರಲ್ಲಿ ಈ ಮೀನಿಗೆ ಸರ್ಕಾರ ನಿಷೇಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>