<p><strong>ಜಗಳೂರು</strong>: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಭಾನುವಾರ ಕಮ್ಮವಾರಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಏಕಾದಶ ರುದ್ರಾಭಿಷೇಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.</p>.<p>ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಕಮ್ಮವಾರಿ ಸಮಾಜದ ಮಹಿಳೆಯರು, ಮಕ್ಕಳು ಹಾಗೂ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನಡೆದವು.</p>.<p>ಸತ್ಯನಾರಾಯಣ ಸ್ವಾಮಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದಿನವಿಡೀ ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<p>ಸತ್ಯನಾರಾಯಣ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಭಕ್ತಸಮೂಹ ಸಾಮೂಹಿಕವಾಗಿ ಪಂಕ್ತಿಯಲ್ಲಿ ಕುಳಿತು ಪ್ರಸಾದ ಸ್ವೀಕರಿಸಿತು. ಗ್ರಾಮದ ಮನೆಗಳನ್ನು ತಳಿರು ತೋರಣ, ರಂಗೋಲಿಯಿಂದ ಅಲಂಕರಿಸಲಾಗಿತ್ತು. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.</p>.<p>ತಾಲ್ಲೂಕಿನ ತೊರೆಸಾಲು ಭಾಗದ ಸಿದ್ದಿಹಳ್ಳಿ, ಮಲ್ಲಾಪುರ, ಕಮಂಡಲಗೊಂದಿ, ಚಿಕ್ಕ ಮಲ್ಲನಹೊಳೆ, ಹಿರೇಮಲ್ಲನಹೊಳೆ, ಹುಚ್ಚವ್ವನಹಳ್ಳಿ, ಮಲ್ಲಾಪುರ ಸೇರಿದಂತೆ ದಾವಣಗೆರೆ, ಚಿತ್ರದುರ್ಗ ಭಾಗದ ಕಮ್ಮವಾರಿ ಸಮಾಜದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-1606310657</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಭಾನುವಾರ ಕಮ್ಮವಾರಿ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಸ್ವಾಮಿ ಪೂಜೆ ಹಾಗೂ ಏಕಾದಶ ರುದ್ರಾಭಿಷೇಕ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.</p>.<p>ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯ ಕಮ್ಮವಾರಿ ಸಮಾಜದ ಮಹಿಳೆಯರು, ಮಕ್ಕಳು ಹಾಗೂ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನಡೆದವು.</p>.<p>ಸತ್ಯನಾರಾಯಣ ಸ್ವಾಮಿ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದಿನವಿಡೀ ಭಕ್ತರು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.</p>.<p>ಸತ್ಯನಾರಾಯಣ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಭಕ್ತಸಮೂಹ ಸಾಮೂಹಿಕವಾಗಿ ಪಂಕ್ತಿಯಲ್ಲಿ ಕುಳಿತು ಪ್ರಸಾದ ಸ್ವೀಕರಿಸಿತು. ಗ್ರಾಮದ ಮನೆಗಳನ್ನು ತಳಿರು ತೋರಣ, ರಂಗೋಲಿಯಿಂದ ಅಲಂಕರಿಸಲಾಗಿತ್ತು. ಗ್ರಾಮದಲ್ಲಿ ಹಬ್ಬದ ಸಂಭ್ರಮ ಮನೆಮಾಡಿತ್ತು.</p>.<p>ತಾಲ್ಲೂಕಿನ ತೊರೆಸಾಲು ಭಾಗದ ಸಿದ್ದಿಹಳ್ಳಿ, ಮಲ್ಲಾಪುರ, ಕಮಂಡಲಗೊಂದಿ, ಚಿಕ್ಕ ಮಲ್ಲನಹೊಳೆ, ಹಿರೇಮಲ್ಲನಹೊಳೆ, ಹುಚ್ಚವ್ವನಹಳ್ಳಿ, ಮಲ್ಲಾಪುರ ಸೇರಿದಂತೆ ದಾವಣಗೆರೆ, ಚಿತ್ರದುರ್ಗ ಭಾಗದ ಕಮ್ಮವಾರಿ ಸಮಾಜದ ಸದಸ್ಯರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-1606310657</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>