<p>ಮಲೇಬೆನ್ನೂರು: ಸಮಾಜದಲ್ಲಿ ದುಷ್ಟ ಶಕ್ತಿಗಳು ಬೆಳೆದಷ್ಟೇ ವೇಗದಲ್ಲಿ ನಾಶ ಹೊಂದುತ್ತವೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯ ಪಟ್ಟರು.</p>.<p>ಪಟ್ಟಣದ ವೀರಭದ್ರೇಶ್ವರ ಮಹಾಕಾಳಿ ದೇವಾಲಯದ 5ನೇ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.</p>.<p>ಶಾಂತಿ ಸಮಾಧಾನ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಆಧುನಿಕತೆಯ ಭರಾಟೆಯಲ್ಲಿ ನಾಗರಿಕತೆ ಹೆಸರಿನಲ್ಲಿ ಸಂಸ್ಕೃತಿಯನ್ನು ನಾಶ ಮಾಡಬೇಡಿ ಎಂದರು.</p>.<p>‘ಧರ್ಮ, ಸಂಸ್ಕೃತಿ ಪರಿಪಾಲನೆ ಮಾಡಿದಾಗ ಮಾನವ ಜೀವನ ಸಂಕಷ್ಟಗಳಿಗೆ ಸಿಲುಕುವುದಿಲ್ಲ. ಎಲ್ಲಾ ವರ್ಗದವರೂ ಸಾಮರಸ್ಯದಿಂದ ಬಾಳಬೇಕು. ಜನ ಧರ್ಮಕಾರ್ಯಗಳಿಗೆ ತಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಬಾಳೆಹೊನ್ನೂರು ಧರ್ಮಪೀಠದಲ್ಲಿ 51 ಅಡಿಯ ಜಗದ್ಗುರು ರೇಣುಕಾಚಾರ್ಯರ ಶಿಲಾಮೂರ್ತಿ ನಿರ್ಮಾಣವಾಗುತ್ತಿದೆ. ಆಂಧ್ರಪ್ರದೇಶದ ಮಡಕಶಿರಾದಿಂದ ಶಿಲೆಗಳು ರಂಭಾಪುರಿಗೆ ಬಂದಿವೆ ಎಂದು ತಿಳಿಸಿದರು.</p>.<p>₹ 12 ಕೋಟಿ ವೆಚ್ಚದ ಯೋಜನೆಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ₹ 5 ಕೋಟಿ ಅನುದಾನ ನೀಡಿದ್ದರು. ನಂತರದ ಸರ್ಕಾರಗಳು ಅನುದಾನ ನೀಡಲಿಲ್ಲ. ಆದರೆ ದಾನಿಗಳು, ಭಕ್ತರ ಸಹಕಾರದಿಂದ ಕೆಲಸ ಮುಂದುವರೆದಿದೆ ಎಂದರು.</p>.<p>ಟ್ರಸ್ಟಿ ಬಿ. ಚಿದಾನಂದಪ್ಪ ಸ್ವಾಗತಿಸಿದರು, ಟ್ರಸ್ಟ್ ಪದಾಧಿಕಾರಿಗಳು, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹಾಗೂ ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-1441053399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲೇಬೆನ್ನೂರು: ಸಮಾಜದಲ್ಲಿ ದುಷ್ಟ ಶಕ್ತಿಗಳು ಬೆಳೆದಷ್ಟೇ ವೇಗದಲ್ಲಿ ನಾಶ ಹೊಂದುತ್ತವೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯ ಪಟ್ಟರು.</p>.<p>ಪಟ್ಟಣದ ವೀರಭದ್ರೇಶ್ವರ ಮಹಾಕಾಳಿ ದೇವಾಲಯದ 5ನೇ ವಾರ್ಷಿಕೋತ್ಸವದ ಅಂಗವಾಗಿ ಸೋಮವಾರ ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಆಶೀರ್ವಚನ ನೀಡಿದರು.</p>.<p>ಶಾಂತಿ ಸಮಾಧಾನ ಮಾರುಕಟ್ಟೆಯಲ್ಲಿ ಸಿಗುವುದಿಲ್ಲ. ಆಧುನಿಕತೆಯ ಭರಾಟೆಯಲ್ಲಿ ನಾಗರಿಕತೆ ಹೆಸರಿನಲ್ಲಿ ಸಂಸ್ಕೃತಿಯನ್ನು ನಾಶ ಮಾಡಬೇಡಿ ಎಂದರು.</p>.<p>‘ಧರ್ಮ, ಸಂಸ್ಕೃತಿ ಪರಿಪಾಲನೆ ಮಾಡಿದಾಗ ಮಾನವ ಜೀವನ ಸಂಕಷ್ಟಗಳಿಗೆ ಸಿಲುಕುವುದಿಲ್ಲ. ಎಲ್ಲಾ ವರ್ಗದವರೂ ಸಾಮರಸ್ಯದಿಂದ ಬಾಳಬೇಕು. ಜನ ಧರ್ಮಕಾರ್ಯಗಳಿಗೆ ತಮ್ಮ ದುಡಿಮೆಯ ಸ್ವಲ್ಪ ಭಾಗವನ್ನು ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.</p>.<p>ಬಾಳೆಹೊನ್ನೂರು ಧರ್ಮಪೀಠದಲ್ಲಿ 51 ಅಡಿಯ ಜಗದ್ಗುರು ರೇಣುಕಾಚಾರ್ಯರ ಶಿಲಾಮೂರ್ತಿ ನಿರ್ಮಾಣವಾಗುತ್ತಿದೆ. ಆಂಧ್ರಪ್ರದೇಶದ ಮಡಕಶಿರಾದಿಂದ ಶಿಲೆಗಳು ರಂಭಾಪುರಿಗೆ ಬಂದಿವೆ ಎಂದು ತಿಳಿಸಿದರು.</p>.<p>₹ 12 ಕೋಟಿ ವೆಚ್ಚದ ಯೋಜನೆಗೆ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ₹ 5 ಕೋಟಿ ಅನುದಾನ ನೀಡಿದ್ದರು. ನಂತರದ ಸರ್ಕಾರಗಳು ಅನುದಾನ ನೀಡಲಿಲ್ಲ. ಆದರೆ ದಾನಿಗಳು, ಭಕ್ತರ ಸಹಕಾರದಿಂದ ಕೆಲಸ ಮುಂದುವರೆದಿದೆ ಎಂದರು.</p>.<p>ಟ್ರಸ್ಟಿ ಬಿ. ಚಿದಾನಂದಪ್ಪ ಸ್ವಾಗತಿಸಿದರು, ಟ್ರಸ್ಟ್ ಪದಾಧಿಕಾರಿಗಳು, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹಾಗೂ ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-43-1441053399</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>