ಈ ವಿಷಯವನ್ನು ಚಂದ್ರಕಲಾ ಹಲವು ಬಾರಿ ಪಾಲಕರ ಗಮನಕ್ಕೂ ತಂದಿದ್ದರು. ರಾಜಿ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೂ ಮಾಡಲಾಗಿತ್ತು. ಆದರೆ, ಒಂದೂವರೆ ತಿಂಗಳ ಹಿಂದೆ ದಂಪತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದೆ. ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಪತಿಯು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಹುಣಸಘಟ್ಟ ಕಾಡಿನಲ್ಲಿ ಗುಂಡಿ ತೆಗೆದು ಶವವನ್ನು ಹೂತ್ತಿಟ್ಟಿದ್ದಾನೆ. ಆ ಬಳಿಕ ‘ನಿಮ್ಮ ಮಗಳು ಕಾಣೆಯಾಗಿದ್ದಾಳೆ’ ಎಂದು ಚಂದ್ರಕಲಾ ಪೋಷಕರಿಗೆ ತಿಳಿಸಿದ್ದೂ ಅಲ್ಲದೇ, ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪತ್ನಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾನೆ.