<p><strong>ದಾವಣಗೆರೆ: ದಾ</strong>ನಿಗಳಿಂದ ಸಂಗ್ರಹಿಸಿದ ರಕ್ತವನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ. ರಕ್ತದಾನ ಶಿಬಿರದಲ್ಲಿ ಸಂಗ್ರಹಿಸಿದ ರಕ್ತದ ಶೇ 25ರಷ್ಟನ್ನು ಜಿಲ್ಲಾ ಆಸ್ಪತ್ರೆಗೆ ನೀಡಬೇಕು. ನಿಗದಿತ ದರಕ್ಕಿಂತ ಹೆಚ್ಚು ಹಣವನ್ನು ವಸೂಲಿ ಮಾಡುವಂತಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಖಾಸಗಿ ರಕ್ತನಿಧಿ ಕೇಂದ್ರಗಳ ಸಮನ್ವಯ ಸಭೆ, ಎಚ್ಐವಿ ಹರಡುವಿಕೆ ಮತ್ತು ನಿಯಂತ್ರಣ ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿರುವ ಹಲವು ಖಾಸಗಿ ರಕ್ತನಿಧಿ ಕೇಂದ್ರಗಳು ಎಚ್ಐವಿ ಬಾಧಿತರಿಂದಲೂ ರಕ್ತ ಸಂಗ್ರಹಿಸಿ ಪರೀಕ್ಷಿಸದೇ ಮಾರಾಟ ಮಾಡುತ್ತಿವೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿವೆ. ಈ ಕುರಿತು ಜಿಲ್ಲಾಡಳಿತಕ್ಕೆ ಹಲವು ದೂರುಗಳು ಬಂದಿವೆ. ದಾನಿಗಳಿಂದ ಪಡೆಯುವ ರಕ್ತವನ್ನು ಪರೀಕ್ಷಿಸುವುದು ಕಡ್ಡಾಯ’ ಎಂದು ತಾಕೀತು ಮಾಡಿದರು.</p>.<p>‘ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ರಕ್ತವನ್ನು ಉಚಿತವಾಗಿ ನೀಡಬೇಕು. ನಿಗದಿಪಡಿಸಿದ ದರಪಟ್ಟಿಯನ್ನು ರಕ್ತನಿಧಿ ಕೇಂದ್ರಗಳ ಎದುರು ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚು ಹಣ ವಸೂಲಿ ಮಾಡುವಂತಿಲ್ಲ. ಮತ್ತೊಮ್ಮೆ ಇಂತಹ ದೂರುಗಳು ಬರದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.</p>.<p><strong>200 ಎಚ್ಐವಿ ಪ್ರಕರಣ:</strong></p>.<p>‘ಜಿಲ್ಲೆಯಲ್ಲಿ ಶೇ 0.35 ರಷ್ಟು ಎಚ್ಐವಿ ಸೋಂಕಿತರ ಪ್ರಮಾಣವಿದೆ. ಪ್ರತಿ ವರ್ಷ 200 ಹೊಸ ಎಚ್ಐವಿ ಪ್ರಕರಣಗಳು ಪತ್ತೆಯಾಗುತ್ತಿವೆ. ಎಚ್ಐವಿ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಹದಿಹರೆಯದವರ ಸಮಸ್ಯೆಗಳನ್ನು ಪರಿಹರಿಸಲು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.</p>.<p>‘ಕುತೂಹಲ, ಹೊಸ ಅನುಭವ ಪಡೆಯುವ ಆಸಕ್ತಿ, ಬದಲಾಗುತ್ತಿರುವ ಸಾಮಾಜಿಕ, ಕೌಟುಂಬಿಕ ವಾತಾವರಣದಿಂದ ಯುವಜನರಲ್ಲಿ ಎಚ್ಐವಿ ಸೋಂಕು ಹರಡುತ್ತಿದೆ. ಗರ್ಭಿಣಿಯರಿಗೆ ಎಚ್ಐವಿ ಪರೀಕ್ಷೆ ಕಡ್ಡಾಯ. ಸೋಂಕು ಕಂಡುಬಂದರೆ ವಿಶೇಷ ಚಿಕಿತ್ಸೆಯನ್ನು ನೀಡಿ ತಾಯಿಯಿಂದ ಮಗುವಿಗೆ ಸೋಂಕು ಹರಡುವುದನ್ನು ನಿಯಂತ್ರಿಸಬಹುದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಜರಿದ್ದರು.</p>.<p> <strong>61 ಗ್ರಾಮ ಪಂಚಾಯಿತಿ ಕ್ಷಯಮುಕ್ತ</strong></p><p> ‘ಜಿಲ್ಲೆಯ 61 ಗ್ರಾಮ ಪಂಚಾಯಿತಿಗಳು ಕ್ಷಯ ರೋಗ ಮುಕ್ತವಾಗಿವೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಶ್ರಮವಹಿಸಿ ಜಿಲ್ಲೆಯನ್ನು ಕ್ಷಯ ರೋಗ ಮುಕ್ತವಾಗಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸೂಚನೆ ನೀಡಿದರು. ‘ಕ್ಷಯರೋಗ ನಿರ್ಮೂಲನೆಗೆ ಶಾಲಾ-ಕಾಲೇಜು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಕ್ಷಯರೋಗಿಗಳ ಮಾಹಿತಿಯನ್ನು ಜಿಲ್ಲಾ ಆಸ್ಪತ್ರೆಗೆ ನೀಡಬೇಕು. ಕ್ಷಯರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ನಿಗಾವಹಿಸಬೇಕು’ ಎಂದರು.</p>.<p><strong>2080 ಕ್ಷಯರೋಗಿಗಳು ಪತ್ತೆ</strong> </p><p>‘ಜಿಲ್ಲೆಯಲ್ಲಿ 2080 ಕ್ಷಯರೋಗಿಗಳು ಪತ್ತೆಯಾಗಿದ್ದಾರೆ. ಕ್ಷಯರೋಗಿಗಳಿಗೆ 8991 ಆಹಾರ ಕಿಟ್ ವಿತರಿಸಲಾಗಿದೆ’ ಎಂದು ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮುರಳೀಧರ್ ಸಭೆಗೆ ಮಾಹಿತಿ ನೀಡಿದರು. ‘ಕ್ಷಯರೋಗ ವಾಸಿಯಾಗುವ ಕಾಯಿಲೆ. 9 ತಿಂಗಳವರೆಗೆ ಚಿಕಿತ್ಸೆ ನೀಡಿದಲ್ಲಿ ರೋಗಿ ಗುಣಮುಖನಾಗಲು ಸಾಧ್ಯ. ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ₹ 1000 ಗೌರವಧನ ಉಚಿತವಾಗಿ ಚಿಕಿತ್ಸೆ ಮತ್ತು ಆಹಾರ ಕಿಟ್ ನೀಡಲಾಗುತ್ತಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: ದಾ</strong>ನಿಗಳಿಂದ ಸಂಗ್ರಹಿಸಿದ ರಕ್ತವನ್ನು ಪರೀಕ್ಷೆಗೆ ಒಳಪಡಿಸುವುದು ಕಡ್ಡಾಯ. ರಕ್ತದಾನ ಶಿಬಿರದಲ್ಲಿ ಸಂಗ್ರಹಿಸಿದ ರಕ್ತದ ಶೇ 25ರಷ್ಟನ್ನು ಜಿಲ್ಲಾ ಆಸ್ಪತ್ರೆಗೆ ನೀಡಬೇಕು. ನಿಗದಿತ ದರಕ್ಕಿಂತ ಹೆಚ್ಚು ಹಣವನ್ನು ವಸೂಲಿ ಮಾಡುವಂತಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸೂಚನೆ ನೀಡಿದರು.</p>.<p>ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಏರ್ಪಡಿಸಿದ್ದ ಖಾಸಗಿ ರಕ್ತನಿಧಿ ಕೇಂದ್ರಗಳ ಸಮನ್ವಯ ಸಭೆ, ಎಚ್ಐವಿ ಹರಡುವಿಕೆ ಮತ್ತು ನಿಯಂತ್ರಣ ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯಲ್ಲಿರುವ ಹಲವು ಖಾಸಗಿ ರಕ್ತನಿಧಿ ಕೇಂದ್ರಗಳು ಎಚ್ಐವಿ ಬಾಧಿತರಿಂದಲೂ ರಕ್ತ ಸಂಗ್ರಹಿಸಿ ಪರೀಕ್ಷಿಸದೇ ಮಾರಾಟ ಮಾಡುತ್ತಿವೆ. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿವೆ. ಈ ಕುರಿತು ಜಿಲ್ಲಾಡಳಿತಕ್ಕೆ ಹಲವು ದೂರುಗಳು ಬಂದಿವೆ. ದಾನಿಗಳಿಂದ ಪಡೆಯುವ ರಕ್ತವನ್ನು ಪರೀಕ್ಷಿಸುವುದು ಕಡ್ಡಾಯ’ ಎಂದು ತಾಕೀತು ಮಾಡಿದರು.</p>.<p>‘ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ರಕ್ತವನ್ನು ಉಚಿತವಾಗಿ ನೀಡಬೇಕು. ನಿಗದಿಪಡಿಸಿದ ದರಪಟ್ಟಿಯನ್ನು ರಕ್ತನಿಧಿ ಕೇಂದ್ರಗಳ ಎದುರು ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚು ಹಣ ವಸೂಲಿ ಮಾಡುವಂತಿಲ್ಲ. ಮತ್ತೊಮ್ಮೆ ಇಂತಹ ದೂರುಗಳು ಬರದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.</p>.<p><strong>200 ಎಚ್ಐವಿ ಪ್ರಕರಣ:</strong></p>.<p>‘ಜಿಲ್ಲೆಯಲ್ಲಿ ಶೇ 0.35 ರಷ್ಟು ಎಚ್ಐವಿ ಸೋಂಕಿತರ ಪ್ರಮಾಣವಿದೆ. ಪ್ರತಿ ವರ್ಷ 200 ಹೊಸ ಎಚ್ಐವಿ ಪ್ರಕರಣಗಳು ಪತ್ತೆಯಾಗುತ್ತಿವೆ. ಎಚ್ಐವಿ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಹದಿಹರೆಯದವರ ಸಮಸ್ಯೆಗಳನ್ನು ಪರಿಹರಿಸಲು ಆಪ್ತ ಸಮಾಲೋಚನೆಗೆ ಒಳಪಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹೇಳಿದರು.</p>.<p>‘ಕುತೂಹಲ, ಹೊಸ ಅನುಭವ ಪಡೆಯುವ ಆಸಕ್ತಿ, ಬದಲಾಗುತ್ತಿರುವ ಸಾಮಾಜಿಕ, ಕೌಟುಂಬಿಕ ವಾತಾವರಣದಿಂದ ಯುವಜನರಲ್ಲಿ ಎಚ್ಐವಿ ಸೋಂಕು ಹರಡುತ್ತಿದೆ. ಗರ್ಭಿಣಿಯರಿಗೆ ಎಚ್ಐವಿ ಪರೀಕ್ಷೆ ಕಡ್ಡಾಯ. ಸೋಂಕು ಕಂಡುಬಂದರೆ ವಿಶೇಷ ಚಿಕಿತ್ಸೆಯನ್ನು ನೀಡಿ ತಾಯಿಯಿಂದ ಮಗುವಿಗೆ ಸೋಂಕು ಹರಡುವುದನ್ನು ನಿಯಂತ್ರಿಸಬಹುದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಜರಿದ್ದರು.</p>.<p> <strong>61 ಗ್ರಾಮ ಪಂಚಾಯಿತಿ ಕ್ಷಯಮುಕ್ತ</strong></p><p> ‘ಜಿಲ್ಲೆಯ 61 ಗ್ರಾಮ ಪಂಚಾಯಿತಿಗಳು ಕ್ಷಯ ರೋಗ ಮುಕ್ತವಾಗಿವೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಶ್ರಮವಹಿಸಿ ಜಿಲ್ಲೆಯನ್ನು ಕ್ಷಯ ರೋಗ ಮುಕ್ತವಾಗಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಸೂಚನೆ ನೀಡಿದರು. ‘ಕ್ಷಯರೋಗ ನಿರ್ಮೂಲನೆಗೆ ಶಾಲಾ-ಕಾಲೇಜು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಮೂಡಿಸಬೇಕು. ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಕ್ಷಯರೋಗಿಗಳ ಮಾಹಿತಿಯನ್ನು ಜಿಲ್ಲಾ ಆಸ್ಪತ್ರೆಗೆ ನೀಡಬೇಕು. ಕ್ಷಯರೋಗಿಗಳು ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ನಿಗಾವಹಿಸಬೇಕು’ ಎಂದರು.</p>.<p><strong>2080 ಕ್ಷಯರೋಗಿಗಳು ಪತ್ತೆ</strong> </p><p>‘ಜಿಲ್ಲೆಯಲ್ಲಿ 2080 ಕ್ಷಯರೋಗಿಗಳು ಪತ್ತೆಯಾಗಿದ್ದಾರೆ. ಕ್ಷಯರೋಗಿಗಳಿಗೆ 8991 ಆಹಾರ ಕಿಟ್ ವಿತರಿಸಲಾಗಿದೆ’ ಎಂದು ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮುರಳೀಧರ್ ಸಭೆಗೆ ಮಾಹಿತಿ ನೀಡಿದರು. ‘ಕ್ಷಯರೋಗ ವಾಸಿಯಾಗುವ ಕಾಯಿಲೆ. 9 ತಿಂಗಳವರೆಗೆ ಚಿಕಿತ್ಸೆ ನೀಡಿದಲ್ಲಿ ರೋಗಿ ಗುಣಮುಖನಾಗಲು ಸಾಧ್ಯ. ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ₹ 1000 ಗೌರವಧನ ಉಚಿತವಾಗಿ ಚಿಕಿತ್ಸೆ ಮತ್ತು ಆಹಾರ ಕಿಟ್ ನೀಡಲಾಗುತ್ತಿದೆ’ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>