ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಉದಯ್ ಶಿಕ್ಷೆಗೆ ಒಳಗಾದವನು. 5 ವರ್ಷಗಳ ಹಿಂದೆ ದಾವಣಗೆರೆಯ ಪಿಜಿಯಲ್ಲಿ ಇದ್ದುಕೊಂಡು ಕಾಲೇಜೊಂದರಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಉದಯ್ ಪ್ರೀತಿಸುವುದಾಗಿ ನಂಬಿಸಿ, ಹೆದರಿಸಿ, ಪುಸಲಾಯಿಸಿ ಕರೆದುಕೊಂಡು ಹೋಗಿ, ಮಂತ್ರಾಲಯದಲ್ಲಿ ಅವಳ ಕೊರಳಿಗೆ ತಾಳಿ ಕಟ್ಟಿದ್ದ.