<p><strong>ದಾವಣಗೆರೆ:</strong> ‘ನಮ್ಮ ದೇಹ, ಹಣ ಮತ್ತು ಯೌವ್ವನ ಯಾವುದೂ ಶಾಶ್ವತವಲ್ಲ. ಆದರೆ, ನಾವು ಮಾಡುವಂತಹ ಪುಣ್ಯ ಕಾರ್ಯಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ ಎಂದು ಶಾಸ್ತ್ರ ಹೇಳುತ್ತದೆ. ಆದ್ದರಿಂದ ನಾವೆಲ್ಲರೂ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅಫಜಲಪುರ ಮಠದ ವಿಶ್ವಕರ್ಮ ಪ್ರಣವ ನಿರಂಜನ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕಾಳಿಕಾದೇವಿ ರಸ್ತೆಯಲ್ಲಿರುವ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ವಿಶ್ವಕರ್ಮ ಸಮಾಜ ಸಂಘದಿಂದ ಆಯೋಜಿಸಿದ್ದ 42ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮನೆಯಲ್ಲಿ ಕಸ ತುಂಬಿದಾಗ ಗುಡಿಸಿ ಸ್ವಚ್ಛಗೊಳಿಸುತ್ತೇವೆ, ಬಟ್ಟೆ ಕೊಳೆಯಾದರೆ ತೊಳೆದು ಶುದ್ಧ ಮಾಡುತ್ತೇವೆ. ಅದೇ ರೀತಿ ನಮ್ಮ ಮನಸ್ಸು ಕಲ್ಮಶದಿಂದ ತುಂಬಿದ್ದರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಆಗ ಮನಸ್ಸು ಶುದ್ಧವಾಗುವುದಲ್ಲದೇ, ಶಾಂತಿ ದೊರೆಯುತ್ತದೆ’ ಎಂದರು.</p>.<p>‘ಮಾನವ ಜನ್ಮವು ಶ್ರೇಷ್ಠವಾಗಿದ್ದು, ಅದನ್ನು ಹಾಳು ಮಾಡಿಕೊಳ್ಳದೇ ಧರ್ಮ ಕಾರ್ಯಗಳ ಮೂಲಕ ಸಾರ್ಥಕತೆ ಪಡೆಯಬೇಕು. ವಿಶ್ವಕರ್ಮ ಸಮಾಜ ಸಂಘವು, ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳನ್ನು ಮನಗಂಡು, ಉಚಿತ ಸಾಮೂಹಿಕ ವಿವಾಹ ಮತ್ತು ಉಪನಯನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜವು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಹಿಂದೆ ಇದೇ ಸ್ಥಳದಲ್ಲಿ ಚಿಕ್ಕದಾಗಿದ್ದ ದೇವಾಲಯವನ್ನು ಸುಂದರವಾಗಿ ಅಭಿವೃದ್ಧಿಪಡಿಸಿರುವುದು ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಸಮಾಜದ ಅಭಿವೃದ್ಧಿಗೆ ತಮ್ಮ ಸಹಕಾರ ಸದಾ ಇರುತ್ತದೆ’ ಎಂದು ಜವಳಿ ವರ್ತಕ ಬಿ.ಸಿ.ಉಮಾಪತಿ ಹೇಳಿದರು.</p>.<p>‘ವಿಶ್ವಕರ್ಮ ಸಮಾಜದ ಶ್ರೇಷ್ಠ ಕಾರ್ಯಗಳನ್ನು ಪುರಾಣಗಳ ಕಾಲದಿಂದಲೂ ಉಲ್ಲೇಖಿಸಲಾಗಿದೆ. ತ್ರೇತಾಯುಗ ಮತ್ತು ದ್ವಾಪರ ಯುಗಗಳಲ್ಲಿ ಮಾತ್ರವಲ್ಲದೆ, ಕಲಿಯುಗದಲ್ಲೂ ವಿಶ್ವಕರ್ಮ ಸಮಾಜದ ಕೆಲಸಗಳ ಮಹತ್ವವನ್ನು ತಿಳಿಸಲಾಗಿದೆ’ ಎಂದು ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎಂ. ಮುರುಗೇಶ್ ಹೇಳಿದರು.</p>.<p>ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಆರ್.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಸಾಪುರದ ಬಿ. ನಾಗೇಂದ್ರಚಾರ್, ಎನ್. ಪೂರ್ವಚಾರ್, ಬಿ.ಪಿ. ಜಗನ್ನಾಥ್, ಬಿ.ಪಿ. ರಮೇಶಚಾರ್, ಸಿ.ಪಿ. ಪೂರ್ವಚಾರ್, ಕೊಟ್ರೇಶಚಾರ್, ಬಿ.ವಿ ರಾಜಶೇಖರ್ ಇನ್ನಿತರರು ಇದ್ದರು. <br /><br />ಸಮಾರಂಭದಲ್ಲಿ 2 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರೆ, 102 ವಟುಗಳಿಗೆ ಉಪನಯನ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ನಮ್ಮ ದೇಹ, ಹಣ ಮತ್ತು ಯೌವ್ವನ ಯಾವುದೂ ಶಾಶ್ವತವಲ್ಲ. ಆದರೆ, ನಾವು ಮಾಡುವಂತಹ ಪುಣ್ಯ ಕಾರ್ಯಗಳು ಮಾತ್ರ ಶಾಶ್ವತವಾಗಿ ಉಳಿಯುತ್ತವೆ ಎಂದು ಶಾಸ್ತ್ರ ಹೇಳುತ್ತದೆ. ಆದ್ದರಿಂದ ನಾವೆಲ್ಲರೂ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಅಫಜಲಪುರ ಮಠದ ವಿಶ್ವಕರ್ಮ ಪ್ರಣವ ನಿರಂಜನ ಸ್ವಾಮೀಜಿ ಹೇಳಿದರು.</p>.<p>ಇಲ್ಲಿನ ಕಾಳಿಕಾದೇವಿ ರಸ್ತೆಯಲ್ಲಿರುವ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ವಿಶ್ವಕರ್ಮ ಸಮಾಜ ಸಂಘದಿಂದ ಆಯೋಜಿಸಿದ್ದ 42ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮನೆಯಲ್ಲಿ ಕಸ ತುಂಬಿದಾಗ ಗುಡಿಸಿ ಸ್ವಚ್ಛಗೊಳಿಸುತ್ತೇವೆ, ಬಟ್ಟೆ ಕೊಳೆಯಾದರೆ ತೊಳೆದು ಶುದ್ಧ ಮಾಡುತ್ತೇವೆ. ಅದೇ ರೀತಿ ನಮ್ಮ ಮನಸ್ಸು ಕಲ್ಮಶದಿಂದ ತುಂಬಿದ್ದರೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಆಗ ಮನಸ್ಸು ಶುದ್ಧವಾಗುವುದಲ್ಲದೇ, ಶಾಂತಿ ದೊರೆಯುತ್ತದೆ’ ಎಂದರು.</p>.<p>‘ಮಾನವ ಜನ್ಮವು ಶ್ರೇಷ್ಠವಾಗಿದ್ದು, ಅದನ್ನು ಹಾಳು ಮಾಡಿಕೊಳ್ಳದೇ ಧರ್ಮ ಕಾರ್ಯಗಳ ಮೂಲಕ ಸಾರ್ಥಕತೆ ಪಡೆಯಬೇಕು. ವಿಶ್ವಕರ್ಮ ಸಮಾಜ ಸಂಘವು, ಜನರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿಗಳನ್ನು ಮನಗಂಡು, ಉಚಿತ ಸಾಮೂಹಿಕ ವಿವಾಹ ಮತ್ತು ಉಪನಯನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ’ ಎಂದರು.</p>.<p>‘ಜಿಲ್ಲೆಯಲ್ಲಿ ವಿಶ್ವಕರ್ಮ ಸಮಾಜವು ಸಮಾಜಮುಖಿ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಈ ಹಿಂದೆ ಇದೇ ಸ್ಥಳದಲ್ಲಿ ಚಿಕ್ಕದಾಗಿದ್ದ ದೇವಾಲಯವನ್ನು ಸುಂದರವಾಗಿ ಅಭಿವೃದ್ಧಿಪಡಿಸಿರುವುದು ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾಗಿದೆ. ಸಮಾಜದ ಅಭಿವೃದ್ಧಿಗೆ ತಮ್ಮ ಸಹಕಾರ ಸದಾ ಇರುತ್ತದೆ’ ಎಂದು ಜವಳಿ ವರ್ತಕ ಬಿ.ಸಿ.ಉಮಾಪತಿ ಹೇಳಿದರು.</p>.<p>‘ವಿಶ್ವಕರ್ಮ ಸಮಾಜದ ಶ್ರೇಷ್ಠ ಕಾರ್ಯಗಳನ್ನು ಪುರಾಣಗಳ ಕಾಲದಿಂದಲೂ ಉಲ್ಲೇಖಿಸಲಾಗಿದೆ. ತ್ರೇತಾಯುಗ ಮತ್ತು ದ್ವಾಪರ ಯುಗಗಳಲ್ಲಿ ಮಾತ್ರವಲ್ಲದೆ, ಕಲಿಯುಗದಲ್ಲೂ ವಿಶ್ವಕರ್ಮ ಸಮಾಜದ ಕೆಲಸಗಳ ಮಹತ್ವವನ್ನು ತಿಳಿಸಲಾಗಿದೆ’ ಎಂದು ಹರಿಹರ ಅರ್ಬನ್ ಬ್ಯಾಂಕ್ ಅಧ್ಯಕ್ಷ ಎನ್.ಎಂ. ಮುರುಗೇಶ್ ಹೇಳಿದರು.</p>.<p>ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಆರ್.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬಸಾಪುರದ ಬಿ. ನಾಗೇಂದ್ರಚಾರ್, ಎನ್. ಪೂರ್ವಚಾರ್, ಬಿ.ಪಿ. ಜಗನ್ನಾಥ್, ಬಿ.ಪಿ. ರಮೇಶಚಾರ್, ಸಿ.ಪಿ. ಪೂರ್ವಚಾರ್, ಕೊಟ್ರೇಶಚಾರ್, ಬಿ.ವಿ ರಾಜಶೇಖರ್ ಇನ್ನಿತರರು ಇದ್ದರು. <br /><br />ಸಮಾರಂಭದಲ್ಲಿ 2 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರೆ, 102 ವಟುಗಳಿಗೆ ಉಪನಯನ ನೆರವೇರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>