ಪಾದಯಾತ್ರೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ವಾತಂತ್ರ್ಯ ಬಂದು 70 ವರ್ಷಗಳಾದರೂ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಕೇಂದ್ರದಿಂದ ಸಿಗುವ ಮೀಸಲಾತಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶೇ 7.5ರಷ್ಟು ಮೀಸಲಾತಿ ನೀಡಿಲ್ಲ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಈಗಾಗಲೇ ಮನವಿ ಸಲ್ಲಿಸಿದ್ದು, ಮುಂದಿನ ಹಂತವಾಗಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.