<p>ಹರಿಹರ: ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹೋರಾಟದ ಮೊದಲ ಹಂತವಾಗಿ ಸಾರ್ವಜನಿಕರಿಂದ ಸಹಿ ಅಭಿಯಾನ ಆರಂಭಿಸಲಾಗಿದೆ ಎಂದು ಮುಖಂಡ ನಂದಿಗಾವಿ ಎನ್.ಎಚ್. ಶ್ರೀನಿವಾಸ ತಿಳಿಸಿದರು.</p>.<p>ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಮಂಗಳವಾರ ಸಂಜೆ ‘ನಮ್ಮ ನಗರ, ನಮ್ಮ ಧ್ವನಿ’ ಎಂಬ ಘೋಷವಾಕ್ಯದಡಿಯಲ್ಲಿ ಸಾರ್ವಜನಿಕ ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದಾವಣಗೆರೆಯಲ್ಲಿ ಈಗಾಗಲೇ ಅನೇಕ ವೈದ್ಯಕೀಯ ಹಾಗೂ ತಾಂತ್ರಿಕ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಆದಕಾರಣ ಸರ್ಕಾರ ದಾವಣಗೆರೆಗೆ ಸ್ಥಾಪಿಸಲು ಯೋಜಿಸಿರುವ ಮೆಡಿಕಲ್ ಕಾಲೇಜು ಯೋಜನೆಯನ್ನು ಹರಿಹರಕ್ಕೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕ ಎಸ್. ರಾಮಪ್ಪ ಮಾತನಾಡಿ, ‘ನಗರದಲ್ಲಿ ಕಾಲೇಜು ಸ್ಥಾಪನೆಗೆ ಅಗತ್ಯವಾದ ಮೂಲ ಸೌಲಭ್ಯಗಳಿವೆ. ಹೆಚ್ಚುವರಿ ಸೌಲಭ್ಯಗಳ ಅಗತ್ಯವಿದ್ದಲ್ಲಿ ಬೇಡಿಕೆಗಳನ್ನು ಪೂರೈಸಲಾಗುವುದು. ಮೆಡಿಕಲ್ ಕಾಲೇಜು ಹೋರಾಟಕ್ಕೆ ನಮ್ಮ ಹಾಗೂ ಪಕ್ಷದ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತೇವೆ’ ಎಂದರು.</p>.<p>ಸಂಚಾಲಕ ಎಚ್. ನಿಜಗುಣ ಮಾತನಾಡಿ, ‘ಹೋರಾಟ ಮೊದಲ ಹಂತವಾಗಿ ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಅಭಿಯಾನದ ಮೂಲಕ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀಕ್ಷ್ಣಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಹೋರಾಟದ ಸಂಚಾಲಕರಾದ ಎಚ್.ಕೆ. ಕೊಟ್ರಪ್ಪ, ಜೆ. ಕಲೀಂಬಾಷಾ, ಜಿ.ಎಚ್. ಮರಿಯೋಜಿರಾವ್, ಸಿ.ಎಚ್. ಹುಲಿಗೇಶ್, ಹಂಚಿನ ನಾಗಪ್ಪ, ಎಚ್.ಬಿ. ರುದ್ರೇಗೌಡ, ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹೋರಾಟದ ಮೊದಲ ಹಂತವಾಗಿ ಸಾರ್ವಜನಿಕರಿಂದ ಸಹಿ ಅಭಿಯಾನ ಆರಂಭಿಸಲಾಗಿದೆ ಎಂದು ಮುಖಂಡ ನಂದಿಗಾವಿ ಎನ್.ಎಚ್. ಶ್ರೀನಿವಾಸ ತಿಳಿಸಿದರು.</p>.<p>ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಮಂಗಳವಾರ ಸಂಜೆ ‘ನಮ್ಮ ನಗರ, ನಮ್ಮ ಧ್ವನಿ’ ಎಂಬ ಘೋಷವಾಕ್ಯದಡಿಯಲ್ಲಿ ಸಾರ್ವಜನಿಕ ಸಹಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದಾವಣಗೆರೆಯಲ್ಲಿ ಈಗಾಗಲೇ ಅನೇಕ ವೈದ್ಯಕೀಯ ಹಾಗೂ ತಾಂತ್ರಿಕ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಆದಕಾರಣ ಸರ್ಕಾರ ದಾವಣಗೆರೆಗೆ ಸ್ಥಾಪಿಸಲು ಯೋಜಿಸಿರುವ ಮೆಡಿಕಲ್ ಕಾಲೇಜು ಯೋಜನೆಯನ್ನು ಹರಿಹರಕ್ಕೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಸಕ ಎಸ್. ರಾಮಪ್ಪ ಮಾತನಾಡಿ, ‘ನಗರದಲ್ಲಿ ಕಾಲೇಜು ಸ್ಥಾಪನೆಗೆ ಅಗತ್ಯವಾದ ಮೂಲ ಸೌಲಭ್ಯಗಳಿವೆ. ಹೆಚ್ಚುವರಿ ಸೌಲಭ್ಯಗಳ ಅಗತ್ಯವಿದ್ದಲ್ಲಿ ಬೇಡಿಕೆಗಳನ್ನು ಪೂರೈಸಲಾಗುವುದು. ಮೆಡಿಕಲ್ ಕಾಲೇಜು ಹೋರಾಟಕ್ಕೆ ನಮ್ಮ ಹಾಗೂ ಪಕ್ಷದ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತೇವೆ’ ಎಂದರು.</p>.<p>ಸಂಚಾಲಕ ಎಚ್. ನಿಜಗುಣ ಮಾತನಾಡಿ, ‘ಹೋರಾಟ ಮೊದಲ ಹಂತವಾಗಿ ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಅಭಿಯಾನದ ಮೂಲಕ ಆರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀಕ್ಷ್ಣಗೊಳಿಸಲಾಗುವುದು’ ಎಂದು ತಿಳಿಸಿದರು.</p>.<p>ಹೋರಾಟದ ಸಂಚಾಲಕರಾದ ಎಚ್.ಕೆ. ಕೊಟ್ರಪ್ಪ, ಜೆ. ಕಲೀಂಬಾಷಾ, ಜಿ.ಎಚ್. ಮರಿಯೋಜಿರಾವ್, ಸಿ.ಎಚ್. ಹುಲಿಗೇಶ್, ಹಂಚಿನ ನಾಗಪ್ಪ, ಎಚ್.ಬಿ. ರುದ್ರೇಗೌಡ, ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>