ಆಧುನಿಕ ವೈದ್ಯಕೀಯ ವಿಜ್ಞಾನದ ವಿರುದ್ಧದ ಸುಳ್ಳು ಪ್ರಚಾರವನ್ನು ನಿಲ್ಲಿಸಬೇಕು. ರಾಮದೇವ್ ಅವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವೈದ್ಯಕೀಯ ಸಿಬ್ಬಂದಿ, ಕೋವಿಡ್ ವಾರಿಯರ್ಗಳ ಮೇಲಾಗುವ ಹಲ್ಲೆಗಳನ್ನು ತಡೆಯಬೇಕು. ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆ ವಿಧಿಸಬೇಕು. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ, ಎಲ್ಲರಿಗೂ ಉಚಿತವಾಗಿ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಖಾತ್ರಿಪಡಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.