<p><strong>ದಾವಣಗೆರೆ:</strong> ಜೈವಿಕ ಸಂಪನ್ಮೂಲಗಳನ್ನು ಲಾಭಕ್ಕೆ ಅಥವಾ ವ್ಯಾಪಾರಕ್ಕೆ ಬಳಸುವವರು ನಿಗದಿತ ಶುಲ್ಕವನ್ನು ಪಾವತಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತು ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜೀವವೈವಿಧ್ಯ ನಿರ್ವಹಣಾ ಸಮಿತಿಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚನೆಯಾಗಬೇಕು. ನಾಟಿ ವೈದ್ಯರು ವ್ಯಾಣಿಜ್ಯ ಉದ್ದೇಶ, ಆರ್ಥಿಕ ಲಾಭಕ್ಕಾಗಿ ಜೈವಿಕ ಸಂಪನ್ಮೂಲಗಳನ್ನು ಬಳಸುತ್ತಿದ್ದರೆ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ. ವ್ಯಾಪಾರದ ಉದ್ದೇಶ ಇಲ್ಲವೆಂದಾದರೆ ಶುಲ್ಕವನ್ನು ಪಾವತಿಸುವಂತಿಲ್ಲ’ ಎಂದರು.</p>.<p>‘ಅಳಿವಿನಂಚಿನಲ್ಲಿರುವ, ಅತಿ ವಿರಳ ಸಂಖ್ಯೆಯ ಔಷಧೀಯ ಸಸ್ಯಗಳು ಬೆಳೆಯುವ ಪ್ರದೇಶವನ್ನು ಪಾರಂಪರಿಕ ತಾಣವೆಂದು ಘೋಷಿಸಿ ಸಂರಕ್ಷಿಸಬೇಕು. ಪರಿಸರಕ್ಕೆ ಹಾನಿಯುಂಟು ಮಾಡುವ ಕೈಗಾರಿಕೆ, ಕಾರ್ಖಾನೆಗಳನ್ನು ನಿಯಂತ್ರಿಸುವ ಅಧಿಕಾರ ಸಮಿತಿಗೆ ಇದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಮತಾ ಹೊಸಗೌಡರ್, ಮಂಡಳಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸಂಶೋಧನಾ ಸಹಾಯಕ ಪ್ರೀತಂ ಎಸ್., ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜೈವಿಕ ಸಂಪನ್ಮೂಲಗಳನ್ನು ಲಾಭಕ್ಕೆ ಅಥವಾ ವ್ಯಾಪಾರಕ್ಕೆ ಬಳಸುವವರು ನಿಗದಿತ ಶುಲ್ಕವನ್ನು ಪಾವತಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತು ಶುಕ್ರವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಜೀವವೈವಿಧ್ಯ ನಿರ್ವಹಣಾ ಸಮಿತಿಗಳು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಚನೆಯಾಗಬೇಕು. ನಾಟಿ ವೈದ್ಯರು ವ್ಯಾಣಿಜ್ಯ ಉದ್ದೇಶ, ಆರ್ಥಿಕ ಲಾಭಕ್ಕಾಗಿ ಜೈವಿಕ ಸಂಪನ್ಮೂಲಗಳನ್ನು ಬಳಸುತ್ತಿದ್ದರೆ ಶುಲ್ಕವನ್ನು ಪಾವತಿಸಬೇಕಾಗಿರುತ್ತದೆ. ವ್ಯಾಪಾರದ ಉದ್ದೇಶ ಇಲ್ಲವೆಂದಾದರೆ ಶುಲ್ಕವನ್ನು ಪಾವತಿಸುವಂತಿಲ್ಲ’ ಎಂದರು.</p>.<p>‘ಅಳಿವಿನಂಚಿನಲ್ಲಿರುವ, ಅತಿ ವಿರಳ ಸಂಖ್ಯೆಯ ಔಷಧೀಯ ಸಸ್ಯಗಳು ಬೆಳೆಯುವ ಪ್ರದೇಶವನ್ನು ಪಾರಂಪರಿಕ ತಾಣವೆಂದು ಘೋಷಿಸಿ ಸಂರಕ್ಷಿಸಬೇಕು. ಪರಿಸರಕ್ಕೆ ಹಾನಿಯುಂಟು ಮಾಡುವ ಕೈಗಾರಿಕೆ, ಕಾರ್ಖಾನೆಗಳನ್ನು ನಿಯಂತ್ರಿಸುವ ಅಧಿಕಾರ ಸಮಿತಿಗೆ ಇದೆ’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಮತಾ ಹೊಸಗೌಡರ್, ಮಂಡಳಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸಂಶೋಧನಾ ಸಹಾಯಕ ಪ್ರೀತಂ ಎಸ್., ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>