<p><strong>ದಾವಣಗೆರೆ:</strong> ‘ಮನುಷ್ಯ ತನ್ನ ದೇಹದ ಮೇಲೆ ನಿಯಂತ್ರಣ ಇಟ್ಟುಕೊಳ್ಳುವುದು ಅಸಾಧ್ಯ. ಆದರೆ, ಸ್ವಲ್ಪ ಕಷ್ಟಪಟ್ಟರೆ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬಹುದು’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ. ರಾಘವನ್ ಅಭಿಪ್ರಾಯಪಟ್ಟರು.</p>.<p>ನಗರದ ಮಾತೃಛಾಯಾ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಧ್ಯಾನ ದಿನಾಚರಣೆ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಅಷ್ಟಾಂಗ ಯೋಗ ಕುರಿತು ಮಾತನಾಡಿದರು.</p>.<p>‘ಮನಸ್ಸಿನೊಂದಿಗೆ ಯಾನ ಮಾಡುವುದೇ ಧ್ಯಾನ. ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಧ್ಯಾನಾಸಕ್ತರಾದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>‘ಪಾಲಕರು ಹೆಚ್ಚು ಅಂಕ ಗಳಿಸುವಂತೆ ಮಕ್ಕಳಿಗೆ ದುಂಬಾಲು ಬೀಳದೆ ಸಾಮಾಜಿಕ, ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಮೂಲಕ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮಕ್ಕಳಲ್ಲಿ ಎಳವೆಯಿಂದಲೇ ಸಾಹಸ ಪ್ರವೃತ್ತಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಮೊದಲು ಯೋಗಾಭ್ಯಾಸಕ್ಕೆ ಕಳುಹಿಸುವುದು ಸೂಕ್ತ’ ಎಂದು ಹಿಮಾಲಯನ್ ಅಡ್ವೆಂಚರ್ ಅಕಾಡೆಮಿ ಮುಖ್ಯಸ್ಥ ಎನ್.ಕೆ. ಕೊಟ್ರೇಶ ಹೇಳಿದರು.</p>.<p>ಜಾರ್ಖಂಡ್ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕಿರಿಯರ ಯೋಗ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ ಸೇವೆ ಸಲ್ಲಿಸಲು ತೆರಳಲಿರುವ ಅಷ್ಟಾಂಗ ವಿನ್ಯಾಸ ಯೋಗ ಅಕಾಡೆಮಿಯ ಅಧ್ಯಕ್ಷ ತೀರ್ಥರಾಜ ಹೋಲೂರ್ ಹಾಗೂ ಸುಮಾ ಹೋಲೂರ್ ಅವರನ್ನು ಬೀಳ್ಕೊಡಲಾಯಿತು.</p>.<p>19 ವರ್ಷದೊಳಗಿನ ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ದಾವಣಗೆರೆಯ ಆಟಗಾರ ಎ.ಎ.ರೋಹಿತ್ ಅವರನ್ನು ಸತ್ಕರಿಸಲಾಯಿತು.</p>.<p>ಮಾತೃಛಾಯಾ ಯೋಗ ಕೇಂದ್ರದ ಅಧ್ಯಕ್ಷ ಅಗಸನಕಟ್ಟೆ ಅರುಣ್, ಯೋಗ ಶಿಕ್ಷಕ ಚಂದ್ರಪ್ಪ ಡಿ, ಗಂಗಾಂಬಿಕಾ, ಪುಷ್ಪಾ ವಾಲಿ, ಸ್ವಪ್ನಾ ಅರುಣ್ ಹಾಜರಿದ್ದರು. ಅಕ್ಷರಾ ಮತ್ತು ಇಂಪನಾ ಯೋಗ ನೃತ್ಯ ಪ್ರದರ್ಶಿಸಿದರು.</p>.<p>ಈಚೆಗೆ ಬೆಂಗಳೂರಿನಲ್ಲಿ ನಡೆದ ಗ್ಲೋಬಲ್ ಯೋಗ ಶೃಂಗದಲ್ಲಿ ಭಾಗವಹಿಸಿದ್ದ ಯೋಗಪಟುಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಯೋಗ ಗುರು ಅನಿಲ್ ಕುಮಾರ್ ರಾಯ್ಕರ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಮನುಷ್ಯ ತನ್ನ ದೇಹದ ಮೇಲೆ ನಿಯಂತ್ರಣ ಇಟ್ಟುಕೊಳ್ಳುವುದು ಅಸಾಧ್ಯ. ಆದರೆ, ಸ್ವಲ್ಪ ಕಷ್ಟಪಟ್ಟರೆ ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸಬಹುದು’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ. ರಾಘವನ್ ಅಭಿಪ್ರಾಯಪಟ್ಟರು.</p>.<p>ನಗರದ ಮಾತೃಛಾಯಾ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಧ್ಯಾನ ದಿನಾಚರಣೆ ಹಾಗೂ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಅಷ್ಟಾಂಗ ಯೋಗ ಕುರಿತು ಮಾತನಾಡಿದರು.</p>.<p>‘ಮನಸ್ಸಿನೊಂದಿಗೆ ಯಾನ ಮಾಡುವುದೇ ಧ್ಯಾನ. ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಧ್ಯಾನಾಸಕ್ತರಾದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>‘ಪಾಲಕರು ಹೆಚ್ಚು ಅಂಕ ಗಳಿಸುವಂತೆ ಮಕ್ಕಳಿಗೆ ದುಂಬಾಲು ಬೀಳದೆ ಸಾಮಾಜಿಕ, ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಮೂಲಕ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಮಕ್ಕಳಲ್ಲಿ ಎಳವೆಯಿಂದಲೇ ಸಾಹಸ ಪ್ರವೃತ್ತಿ ಬೆಳೆಸಬೇಕು. ಈ ನಿಟ್ಟಿನಲ್ಲಿ ಮೊದಲು ಯೋಗಾಭ್ಯಾಸಕ್ಕೆ ಕಳುಹಿಸುವುದು ಸೂಕ್ತ’ ಎಂದು ಹಿಮಾಲಯನ್ ಅಡ್ವೆಂಚರ್ ಅಕಾಡೆಮಿ ಮುಖ್ಯಸ್ಥ ಎನ್.ಕೆ. ಕೊಟ್ರೇಶ ಹೇಳಿದರು.</p>.<p>ಜಾರ್ಖಂಡ್ನ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಕಿರಿಯರ ಯೋಗ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ ಸೇವೆ ಸಲ್ಲಿಸಲು ತೆರಳಲಿರುವ ಅಷ್ಟಾಂಗ ವಿನ್ಯಾಸ ಯೋಗ ಅಕಾಡೆಮಿಯ ಅಧ್ಯಕ್ಷ ತೀರ್ಥರಾಜ ಹೋಲೂರ್ ಹಾಗೂ ಸುಮಾ ಹೋಲೂರ್ ಅವರನ್ನು ಬೀಳ್ಕೊಡಲಾಯಿತು.</p>.<p>19 ವರ್ಷದೊಳಗಿನ ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿರುವ ದಾವಣಗೆರೆಯ ಆಟಗಾರ ಎ.ಎ.ರೋಹಿತ್ ಅವರನ್ನು ಸತ್ಕರಿಸಲಾಯಿತು.</p>.<p>ಮಾತೃಛಾಯಾ ಯೋಗ ಕೇಂದ್ರದ ಅಧ್ಯಕ್ಷ ಅಗಸನಕಟ್ಟೆ ಅರುಣ್, ಯೋಗ ಶಿಕ್ಷಕ ಚಂದ್ರಪ್ಪ ಡಿ, ಗಂಗಾಂಬಿಕಾ, ಪುಷ್ಪಾ ವಾಲಿ, ಸ್ವಪ್ನಾ ಅರುಣ್ ಹಾಜರಿದ್ದರು. ಅಕ್ಷರಾ ಮತ್ತು ಇಂಪನಾ ಯೋಗ ನೃತ್ಯ ಪ್ರದರ್ಶಿಸಿದರು.</p>.<p>ಈಚೆಗೆ ಬೆಂಗಳೂರಿನಲ್ಲಿ ನಡೆದ ಗ್ಲೋಬಲ್ ಯೋಗ ಶೃಂಗದಲ್ಲಿ ಭಾಗವಹಿಸಿದ್ದ ಯೋಗಪಟುಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಯೋಗ ಗುರು ಅನಿಲ್ ಕುಮಾರ್ ರಾಯ್ಕರ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>