<p><strong>ದಾವಣಗೆರೆ</strong>: ‘ಬಿಲ್ಲವ ಸಮುದಾಯದ ವಿವಿಧ ಬೇಡಿಕೆಗಳ ಸಂಬಂಧ ಸರ್ಕಾರದ ಗಮನ ಸೆಳೆಯಲು 10 ದಿನಗಳಲ್ಲಿ ಮಂಗಳೂರಿನಲ್ಲಿ ಬಿಲ್ಲವ, ನಾಮದಾರಿ ನಾಯಕರು ಹಾಗೂ ಸ್ವಾಮೀಜಿಗಳ ಸಭೆ ನಡೆಸಲಾಗುವುದು’ ಎಂದುಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>‘ಸರ್ಕಾರ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಬಿಲ್ಲವರ ಕುಲಕಸುಬು ಘೋಷಣೆ ಮಾಡುವುದಾಗಿ ಭರವಸೆ ನೀಡಿತ್ತು. ಈವರೆಗೆ ಘೋಷಣೆ ಮಾಡಿಲ್ಲ. ನಮ್ಮ ಸಮುದಾಯದ 7 ಶಾಸಕರು ಹಾಗೂ ಇಬ್ಬರು ಸಚಿವರು ಧ್ವನಿ ಎತ್ತುತ್ತಿಲ್ಲ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿಆರೋಪಿಸಿದರು.</p>.<p>‘ದಕ್ಷಿಣಕನ್ನಡ ಜಿಲ್ಲೆಯಲ್ಲಿ 5.36ಲಕ್ಷ, ಉಡುಪಿಯಲ್ಲಿ 3 ಲಕ್ಷ ಬಿಲ್ಲವ ಸಮುದಾಯದ ಜನರಿದ್ದು, ಅವರನ್ನು ಒಡೆದು ಆಡಳಿತ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ನಡೆಯುವುದಿಲ್ಲ. ಪ್ರವೀಣ್ ನೆಟ್ಟಾರು ಏತಕ್ಕಾಗಿ ಸತ್ತರು. ಬರೀ ಬಿಲ್ಲವರಷ್ಟೇ ಸಾಯಬೇಕಾ? ದೇಶ ಧರ್ಮ ಹೇಳಿಕೊಂಡು ಇಂತಹ ಹುನ್ನಾರಕ್ಕೆ ಒಳಪಡಬಾರದು’ ಎಂದರು.</p>.<p class="Subhead"><strong>ಆಕ್ಷೇಪ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸರ್ಕಾರದಿಂದ ನಾರಾಯಣಗುರು ಜಯಂತಿ ಆಚರಿಸದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಪಕ್ಷದ ಕಾರ್ಯಕ್ರಮದಲ್ಲಿ ನಾರಾಯಣಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿರುವುದು ಖಂಡನೀಯ. ಜಿಲ್ಲಾ ಕೇಂದ್ರಗಳಲ್ಲಿನ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿಗಳೇ ಭಾಗವಹಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಚ್.ವೈ.ಆನಂದ್, ಆರ್.ಪ್ರತಾಪ್, ಜ್ಞಾನದೇವ, ಪ್ರಕಾಶ್, ಬಾಲರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಬಿಲ್ಲವ ಸಮುದಾಯದ ವಿವಿಧ ಬೇಡಿಕೆಗಳ ಸಂಬಂಧ ಸರ್ಕಾರದ ಗಮನ ಸೆಳೆಯಲು 10 ದಿನಗಳಲ್ಲಿ ಮಂಗಳೂರಿನಲ್ಲಿ ಬಿಲ್ಲವ, ನಾಮದಾರಿ ನಾಯಕರು ಹಾಗೂ ಸ್ವಾಮೀಜಿಗಳ ಸಭೆ ನಡೆಸಲಾಗುವುದು’ ಎಂದುಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.</p>.<p>‘ಸರ್ಕಾರ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಬಿಲ್ಲವರ ಕುಲಕಸುಬು ಘೋಷಣೆ ಮಾಡುವುದಾಗಿ ಭರವಸೆ ನೀಡಿತ್ತು. ಈವರೆಗೆ ಘೋಷಣೆ ಮಾಡಿಲ್ಲ. ನಮ್ಮ ಸಮುದಾಯದ 7 ಶಾಸಕರು ಹಾಗೂ ಇಬ್ಬರು ಸಚಿವರು ಧ್ವನಿ ಎತ್ತುತ್ತಿಲ್ಲ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿಆರೋಪಿಸಿದರು.</p>.<p>‘ದಕ್ಷಿಣಕನ್ನಡ ಜಿಲ್ಲೆಯಲ್ಲಿ 5.36ಲಕ್ಷ, ಉಡುಪಿಯಲ್ಲಿ 3 ಲಕ್ಷ ಬಿಲ್ಲವ ಸಮುದಾಯದ ಜನರಿದ್ದು, ಅವರನ್ನು ಒಡೆದು ಆಡಳಿತ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇದು ನಡೆಯುವುದಿಲ್ಲ. ಪ್ರವೀಣ್ ನೆಟ್ಟಾರು ಏತಕ್ಕಾಗಿ ಸತ್ತರು. ಬರೀ ಬಿಲ್ಲವರಷ್ಟೇ ಸಾಯಬೇಕಾ? ದೇಶ ಧರ್ಮ ಹೇಳಿಕೊಂಡು ಇಂತಹ ಹುನ್ನಾರಕ್ಕೆ ಒಳಪಡಬಾರದು’ ಎಂದರು.</p>.<p class="Subhead"><strong>ಆಕ್ಷೇಪ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಸರ್ಕಾರದಿಂದ ನಾರಾಯಣಗುರು ಜಯಂತಿ ಆಚರಿಸದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ‘ಪಕ್ಷದ ಕಾರ್ಯಕ್ರಮದಲ್ಲಿ ನಾರಾಯಣಗುರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿರುವುದು ಖಂಡನೀಯ. ಜಿಲ್ಲಾ ಕೇಂದ್ರಗಳಲ್ಲಿನ ಕಾರ್ಯಕ್ರಮಗಳಲ್ಲಿ ಜಿಲ್ಲಾಧಿಕಾರಿಗಳೇ ಭಾಗವಹಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಎಚ್.ವೈ.ಆನಂದ್, ಆರ್.ಪ್ರತಾಪ್, ಜ್ಞಾನದೇವ, ಪ್ರಕಾಶ್, ಬಾಲರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>