<p><strong>ದಾವಣಗೆರೆ:</strong> ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ರಾಜ್ಯದಲ್ಲಿ ಬಿಸಿಯೂಟ ಉಪಹಾರ ಯೋಜನೆಯಲ್ಲಿ 1.18 ಲಕ್ಷ ಮಂದಿ ಬಡ ಮಹಿಳೆಯರು 17 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ ಮಾಸಿಕ ₹2700 ಹಾಗೂ ಇತರೆ ಸಿಬ್ಬಂದಿಗೆ ಮಾಸಿಕ ₹2,600 ವೇತನವಿದೆ. ಇದರಲ್ಲಿ ಕೇಂದ್ರ ಸರ್ಕಾರ ಕೇವಲ ₹600 ಮಾತ್ರ ನೀಡುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಬಿಸಿಯೂಟ ತಯಾರಕರು ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹಲವು ಹೋರಾಟಗಳನ್ನು ನಡೆಸಿದರೂ ನ್ಯಾಯಯುತ ಸೌಲಭ್ಯಗಳು ದೊರಕುತ್ತಿಲ್ಲ’ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಕಳೆದ ಜನವರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಸಂದರ್ಭ ಬಜೆಟ್ನಲ್ಲಿ ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿದ್ದರೂ ಕಾರ್ಯಗತವಾಗಿಲ್ಲ. ಪ್ರಸ್ತುತ ಕೋವಿಡ್ -19 ನಿಂದಾಗಿ ಬಿಸಿಯೂಟ ತಯಾರಿಕಾ ಸಿಬ್ಬಂದಿ ಬಲಿಪಶುಗಳಾಗಿದ್ದಾರೆ. ಕೂಲಿಯೂ ಇಲ್ಲದೇ ಅನ್ನವೂ ಇಲ್ಲದೇ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಸಂಘಟಿತ ವಲಯದ ಹಲವು ವರ್ಗಗಳಿಗೆ ರಾಜ್ಯ ಸರ್ಕಾರದಿಂದ ₹5 ಸಾವಿರ ಪರಿಹಾರ ನೀಡಿರುವುದು ಉತ್ತಮ ಕಾರ್ಯ. ಅದರಂತೆ ಬಿಸಿಯೂಟ ಸಿಬ್ಬಂದಿಗೆ ಪರಿಹಾರ ನೀಡಬೇಕು’ ಎಂದು ಪ್ರತಿಭಟನಾ ನಿರತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಬಿಸಿಯೂಟ ಅಡುಗೆ ಸಿಬ್ಬಂದಿಗೆ ಪ್ರತಿವರ್ಷ ಏಪ್ರಿಲ್ ಹಾಗೂ ಮೇ ತಿಂಗಳ ಬೇಸಿಗೆ ರಜೆ ಪ್ರಯುಕ್ತ ಸಂಭಾವನೆ ಸಿಗುವುದಿಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಜೂನ್, ಜುಲೈ ತಿಂಗಳಿನಲ್ಲಿಯೂ ಶಾಲೆಗಳು ಪ್ರಾರಂಭವಾಗುವುದಿಲ್ಲ. ಆದ್ದರಿಂದ 3 ತಿಂಗಳ ಸಂಭಾವನೆಯನ್ನು ಪರಿಹಾರ ಧನವಾಗಿ ನೀಡಬೇಕೆಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಎಚ್.ಕೆ ರಾಮಚಂದ್ರಪ್ಪ, ಆವರಗೆರೆ ಚಂದ್ರು, ಜ್ಯೋತಿಲಕ್ಷ್ಮಿ,ರುದ್ರಮ್ಮ ಬೆಳಲಗೆರೆ, ಚನ್ನಮ್ಮ, ಸರೋಜ, ರಾಮಣ್ಣ, ರಂಗನಾಥ್, ಹನುಮಕ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬಿಸಿಯೂಟ ತಯಾರಿಸುವ ಅಡುಗೆ ಸಿಬ್ಬಂದಿಗೆ ಮೂರು ತಿಂಗಳ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ರಾಜ್ಯದಲ್ಲಿ ಬಿಸಿಯೂಟ ಉಪಹಾರ ಯೋಜನೆಯಲ್ಲಿ 1.18 ಲಕ್ಷ ಮಂದಿ ಬಡ ಮಹಿಳೆಯರು 17 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದಾರೆ. ಮುಖ್ಯ ಅಡುಗೆಯವರಿಗೆ ಮಾಸಿಕ ₹2700 ಹಾಗೂ ಇತರೆ ಸಿಬ್ಬಂದಿಗೆ ಮಾಸಿಕ ₹2,600 ವೇತನವಿದೆ. ಇದರಲ್ಲಿ ಕೇಂದ್ರ ಸರ್ಕಾರ ಕೇವಲ ₹600 ಮಾತ್ರ ನೀಡುತ್ತಿದೆ. ಉಳಿದ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಬಿಸಿಯೂಟ ತಯಾರಕರು ಕನಿಷ್ಠ ವೇತನ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹಲವು ಹೋರಾಟಗಳನ್ನು ನಡೆಸಿದರೂ ನ್ಯಾಯಯುತ ಸೌಲಭ್ಯಗಳು ದೊರಕುತ್ತಿಲ್ಲ’ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಕಳೆದ ಜನವರಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದ ಸಂದರ್ಭ ಬಜೆಟ್ನಲ್ಲಿ ವೇತನ ಹೆಚ್ಚಿಸುವುದಾಗಿ ಭರವಸೆ ನೀಡಿದ್ದರೂ ಕಾರ್ಯಗತವಾಗಿಲ್ಲ. ಪ್ರಸ್ತುತ ಕೋವಿಡ್ -19 ನಿಂದಾಗಿ ಬಿಸಿಯೂಟ ತಯಾರಿಕಾ ಸಿಬ್ಬಂದಿ ಬಲಿಪಶುಗಳಾಗಿದ್ದಾರೆ. ಕೂಲಿಯೂ ಇಲ್ಲದೇ ಅನ್ನವೂ ಇಲ್ಲದೇ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅಸಂಘಟಿತ ವಲಯದ ಹಲವು ವರ್ಗಗಳಿಗೆ ರಾಜ್ಯ ಸರ್ಕಾರದಿಂದ ₹5 ಸಾವಿರ ಪರಿಹಾರ ನೀಡಿರುವುದು ಉತ್ತಮ ಕಾರ್ಯ. ಅದರಂತೆ ಬಿಸಿಯೂಟ ಸಿಬ್ಬಂದಿಗೆ ಪರಿಹಾರ ನೀಡಬೇಕು’ ಎಂದು ಪ್ರತಿಭಟನಾ ನಿರತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>ಬಿಸಿಯೂಟ ಅಡುಗೆ ಸಿಬ್ಬಂದಿಗೆ ಪ್ರತಿವರ್ಷ ಏಪ್ರಿಲ್ ಹಾಗೂ ಮೇ ತಿಂಗಳ ಬೇಸಿಗೆ ರಜೆ ಪ್ರಯುಕ್ತ ಸಂಭಾವನೆ ಸಿಗುವುದಿಲ್ಲ. ಪ್ರಸ್ತುತ ಪರಿಸ್ಥಿತಿಯಲ್ಲಿ ಜೂನ್, ಜುಲೈ ತಿಂಗಳಿನಲ್ಲಿಯೂ ಶಾಲೆಗಳು ಪ್ರಾರಂಭವಾಗುವುದಿಲ್ಲ. ಆದ್ದರಿಂದ 3 ತಿಂಗಳ ಸಂಭಾವನೆಯನ್ನು ಪರಿಹಾರ ಧನವಾಗಿ ನೀಡಬೇಕೆಂದು ಮನವಿ ಮಾಡಿದರು.</p>.<p>ಪ್ರತಿಭಟನೆಯಲ್ಲಿ ಎಚ್.ಕೆ ರಾಮಚಂದ್ರಪ್ಪ, ಆವರಗೆರೆ ಚಂದ್ರು, ಜ್ಯೋತಿಲಕ್ಷ್ಮಿ,ರುದ್ರಮ್ಮ ಬೆಳಲಗೆರೆ, ಚನ್ನಮ್ಮ, ಸರೋಜ, ರಾಮಣ್ಣ, ರಂಗನಾಥ್, ಹನುಮಕ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>