<p><strong>ಮಾಯಕೊಂಡ:</strong> ಸಮೀಪದ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಪ್ರಾಣಿ ಸಂಗ್ರಹಾಲಯವನ್ನು ರಾಷ್ಟ್ರೀಯ ಹೆದ್ದಾರಿಯ ವಿಜ್ಞಾನ ಕೇಂದ್ರದ ಸಮೀಪಕ್ಕೆ ಸ್ಥಳಾಂತರ ಮಾಡಿ ಇನ್ನಷ್ಟು ಆಕರ್ಷಣೀಯ ಪ್ರವಾಸಿ ತಾಣವಾಗಿಸುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಜಿಲ್ಲಾಧಿಕಾರಿಗೆ ಸಲಹೆ ನೀಡಿದರು.</p>.<p>ಆನಗೋಡು ಬಳಿಯ ಕಿರು ಪ್ರಾಣಿ ಸಂಗ್ರಹಾಲಯಕ್ಕೆ ಈಚೆಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಪ್ರಾಣಿ ಸಂಗ್ರಹಾಲಯವನ್ನು ಅಭಿವೃದ್ಧಿಪಡಿಸಿದರೆ ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದ್ದು, ಸರ್ಕಾರಕ್ಕೆ ಆದಾಯ ಬರಲಿದೆ. ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿರುವುದರಿಂದ ಇಲ್ಲಿ ಕಿರು ಪ್ರಾಣಿ ಸಂಗ್ರಹಾಲಯವು ಇದ್ದೂ ಇಲ್ಲದಂತಾಗಿದೆ. ಇದರಿಂದ ಪ್ರವಾಸಿಗರ ಸಂಖ್ಯೆಯೂ ಕ್ಷೀಣಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಾಣಿ ಸಂಗ್ರಹಾಲಯವನ್ನು ವಿಜ್ಞಾನ ಕೇಂದ್ರದ ಪಕ್ಕಕ್ಕೆ ಸ್ಥಳಾಂತರ ಮಾಡಿ ಅಭಿವೃದ್ಧಿ ಮಾಡಿದರೆ ಅನುಕೂಲವಾಗಲಿದೆ ಎಂದು ವಿವರಿಸಿದರು.</p>.<p>‘ಇಲ್ಲಿರುವ ದೊಡ್ಡ ಪ್ರಾಣಿ ಎಂದರೆ ಕರಡಿ. ಮೃಗಾಲಯ ಅಭಿವೃದ್ಧಿಪಡಿಸಿದರೆ ಸಿಂಹ, ಹುಲಿ, ಚಿರತೆಗಳನ್ನೂ ತಂದು, ಆಕರ್ಷಣೀಯ ಮಾಡಬಹುದು. ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುತ್ತೇನೆ’ ಎಂದು ತಿಳಿಸಿದರು.</p>.<p>ಇಲ್ಲಿ ಬಜರಿಗಾರ್, ವಲ್ ಬರ್ಡ್ಸ್, ಗಿಳಿ, ನವಿಲು, ಗೋಲ್ಡನ್ ಯೆಲ್ಲೋ ಫೆಸೆಂಟ್, ಲೇಡಿ ಆಮ್ಹರ್ಟ್ಸ್ ಫೆಸೆಂಟ್, ಕೊಂಡುಕುರಿ, ಜಿಂಕೆ, ಕೃಷ್ಣಮೃಗ, ಕರಡಿಗಳು ಇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಡಿಎಫ್ಒ ಹರ್ಷವರ್ಧನ್, ಆರ್ಎಫ್ಒ ಷಣ್ಮುಖಪ್ಪ, ದರ್ಶನ್ ನಾಯ್ಕ್, ಮುಖಂಡರಾದ ಕರಿಬಸಪ್ಪ, ಪ್ರಕಾಶ್, ಬಸಣ್ಣ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಕಿರು ಪ್ರಾಣಿ ಸಂಗ್ರಹಾಲಯದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಯಕೊಂಡ:</strong> ಸಮೀಪದ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಪ್ರಾಣಿ ಸಂಗ್ರಹಾಲಯವನ್ನು ರಾಷ್ಟ್ರೀಯ ಹೆದ್ದಾರಿಯ ವಿಜ್ಞಾನ ಕೇಂದ್ರದ ಸಮೀಪಕ್ಕೆ ಸ್ಥಳಾಂತರ ಮಾಡಿ ಇನ್ನಷ್ಟು ಆಕರ್ಷಣೀಯ ಪ್ರವಾಸಿ ತಾಣವಾಗಿಸುವಂತೆ ಶಾಸಕ ಕೆ.ಎಸ್.ಬಸವಂತಪ್ಪ ಅವರು ಜಿಲ್ಲಾಧಿಕಾರಿಗೆ ಸಲಹೆ ನೀಡಿದರು.</p>.<p>ಆನಗೋಡು ಬಳಿಯ ಕಿರು ಪ್ರಾಣಿ ಸಂಗ್ರಹಾಲಯಕ್ಕೆ ಈಚೆಗೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲ ರಾವ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>ಪ್ರಾಣಿ ಸಂಗ್ರಹಾಲಯವನ್ನು ಅಭಿವೃದ್ಧಿಪಡಿಸಿದರೆ ಪ್ರವಾಸಿ ತಾಣವಾಗಿ ರೂಪುಗೊಳ್ಳಲಿದ್ದು, ಸರ್ಕಾರಕ್ಕೆ ಆದಾಯ ಬರಲಿದೆ. ಆನಗೋಡು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಿರುವುದರಿಂದ ಇಲ್ಲಿ ಕಿರು ಪ್ರಾಣಿ ಸಂಗ್ರಹಾಲಯವು ಇದ್ದೂ ಇಲ್ಲದಂತಾಗಿದೆ. ಇದರಿಂದ ಪ್ರವಾಸಿಗರ ಸಂಖ್ಯೆಯೂ ಕ್ಷೀಣಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಾಣಿ ಸಂಗ್ರಹಾಲಯವನ್ನು ವಿಜ್ಞಾನ ಕೇಂದ್ರದ ಪಕ್ಕಕ್ಕೆ ಸ್ಥಳಾಂತರ ಮಾಡಿ ಅಭಿವೃದ್ಧಿ ಮಾಡಿದರೆ ಅನುಕೂಲವಾಗಲಿದೆ ಎಂದು ವಿವರಿಸಿದರು.</p>.<p>‘ಇಲ್ಲಿರುವ ದೊಡ್ಡ ಪ್ರಾಣಿ ಎಂದರೆ ಕರಡಿ. ಮೃಗಾಲಯ ಅಭಿವೃದ್ಧಿಪಡಿಸಿದರೆ ಸಿಂಹ, ಹುಲಿ, ಚಿರತೆಗಳನ್ನೂ ತಂದು, ಆಕರ್ಷಣೀಯ ಮಾಡಬಹುದು. ಈ ಬಗ್ಗೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸುತ್ತೇನೆ’ ಎಂದು ತಿಳಿಸಿದರು.</p>.<p>ಇಲ್ಲಿ ಬಜರಿಗಾರ್, ವಲ್ ಬರ್ಡ್ಸ್, ಗಿಳಿ, ನವಿಲು, ಗೋಲ್ಡನ್ ಯೆಲ್ಲೋ ಫೆಸೆಂಟ್, ಲೇಡಿ ಆಮ್ಹರ್ಟ್ಸ್ ಫೆಸೆಂಟ್, ಕೊಂಡುಕುರಿ, ಜಿಂಕೆ, ಕೃಷ್ಣಮೃಗ, ಕರಡಿಗಳು ಇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಡಿಎಫ್ಒ ಹರ್ಷವರ್ಧನ್, ಆರ್ಎಫ್ಒ ಷಣ್ಮುಖಪ್ಪ, ದರ್ಶನ್ ನಾಯ್ಕ್, ಮುಖಂಡರಾದ ಕರಿಬಸಪ್ಪ, ಪ್ರಕಾಶ್, ಬಸಣ್ಣ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಕಿರು ಪ್ರಾಣಿ ಸಂಗ್ರಹಾಲಯದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>