<p>ದಾವಣಗೆರೆ: ದೀರ್ಘ ಕಾಲ ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ ಹಾಗೂ ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ದಾವಣಗೆರೆ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಒಂದೂವರೆ ವರ್ಷದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ನೋಡಿ ಹತಾಶೆಗೆ ಒಳಗಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆರೋಪಿಸಿದರು.</p>.<p>ಇಲ್ಲಿನ ವಿನೋಬ ನಗರದ 2ನೇ ಮುಖ್ಯ ರಸ್ತೆಯ ಗಣೇಶ ದೇಗುಲದ ಬಳಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚರಂಡಿ ನಿರ್ಮಾಣ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನಾಲ್ಕು ವರ್ಷ ಅಧಿಕಾರದಲ್ಲಿದ್ದವರು ಉತ್ತಮ ಕೆಲಸ ಮಾಡಲಿಲ್ಲ. ನಗರವನ್ನು ಯೋಜನಾಬದ್ಧವಾಗಿ ಅಭಿವೃದ್ಧಿಪಡಿಸುವಲ್ಲಿ ವಿಫಲರಾಗಿದ್ದಾರೆ. ಅವರು ಹಾಳು ಮಾಡಿರುವುದನ್ನು ದುರಸ್ತಿ ಮಾಡುವುದೇ ಕೆಲಸವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘30 ವರ್ಷಗಳ ಹಿಂದೆ ನಗರ ಇಷ್ಟು ಸುಸ್ಥಿತಿಯಲ್ಲಿ ಇರಲಿಲ್ಲ. ಸಣ್ಣ ಮಳೆ ಸುರಿದರೂ ಎಲ್ಲೆಡೆ ನೀರು ನುಗ್ಗುತ್ತಿತ್ತು. ಕೆಸರು ರಸ್ತೆಯಲ್ಲಿ ವಾಹನಗಳು ಸಾಗಬೇಕಿತ್ತು. ಆಟೊ ಚಾಲಕರು ನಿತ್ಯವೂ ಪ್ರತಿಭಟನೆ ನಡೆಸುತ್ತಿದ್ದರು. ಇತ್ತೀಚೆಗೆ ಎಂತಹದೇ ಮಳೆ ಬಂದರೂ ರಸ್ತೆ ಹಾಳಾಗುತ್ತಿಲ್ಲ. ಈ ಬಗ್ಗೆ ಒಂದು ದೂರು ಬಂದಿಲ್ಲ’ ಎಂದು ಹೇಳಿದರು.</p>.<p>‘ವಿನೋಬನಗರದ 1 ಮತ್ತು 2ನೇ ಮುಖ್ಯರಸ್ತೆಯನ್ನು ಪಿ.ಬಿ.ರಸ್ತೆಯವರೆಗೆ ಅಭಿವೃದ್ಧಿಪಡಿಸಲಾಗುತ್ತಿದೆ. ಚರಂಡಿ ನಿರ್ಮಾಣ, ರಸ್ತೆ ವಿಸ್ತರಣೆ ಮಾಡಲಾಗುತ್ತಿದೆ. ವಿದ್ಯುತ್ ಮಾರ್ಗ ಮೇಲ್ದರ್ಜೆಗೆ ಏರಿಸಿದ್ದರೆ ಅನುಕೂಲವಾಗುತ್ತಿತ್ತು. ಕಾಂಕ್ರೀಟ್ ರಸ್ತೆ, ವೈಟ್ ಟ್ಯಾಪಿಂಗ್ ಬಗ್ಗೆ ಮುಂದೆ ಆಲೋಚಿಸಲಾಗುವುದು’ ಎಂದು ಹೇಳಿದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯ ನಾಗರಾಜ್, ಆಯುಕ್ತೆ ರೇಣುಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ದೀರ್ಘ ಕಾಲ ಸಂಸದರಾಗಿದ್ದ ಜಿ.ಎಂ.ಸಿದ್ದೇಶ್ವರ ಹಾಗೂ ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ದಾವಣಗೆರೆ ಅಭಿವೃದ್ಧಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಒಂದೂವರೆ ವರ್ಷದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ನೋಡಿ ಹತಾಶೆಗೆ ಒಳಗಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆರೋಪಿಸಿದರು.</p>.<p>ಇಲ್ಲಿನ ವಿನೋಬ ನಗರದ 2ನೇ ಮುಖ್ಯ ರಸ್ತೆಯ ಗಣೇಶ ದೇಗುಲದ ಬಳಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಚರಂಡಿ ನಿರ್ಮಾಣ ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ನಾಲ್ಕು ವರ್ಷ ಅಧಿಕಾರದಲ್ಲಿದ್ದವರು ಉತ್ತಮ ಕೆಲಸ ಮಾಡಲಿಲ್ಲ. ನಗರವನ್ನು ಯೋಜನಾಬದ್ಧವಾಗಿ ಅಭಿವೃದ್ಧಿಪಡಿಸುವಲ್ಲಿ ವಿಫಲರಾಗಿದ್ದಾರೆ. ಅವರು ಹಾಳು ಮಾಡಿರುವುದನ್ನು ದುರಸ್ತಿ ಮಾಡುವುದೇ ಕೆಲಸವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘30 ವರ್ಷಗಳ ಹಿಂದೆ ನಗರ ಇಷ್ಟು ಸುಸ್ಥಿತಿಯಲ್ಲಿ ಇರಲಿಲ್ಲ. ಸಣ್ಣ ಮಳೆ ಸುರಿದರೂ ಎಲ್ಲೆಡೆ ನೀರು ನುಗ್ಗುತ್ತಿತ್ತು. ಕೆಸರು ರಸ್ತೆಯಲ್ಲಿ ವಾಹನಗಳು ಸಾಗಬೇಕಿತ್ತು. ಆಟೊ ಚಾಲಕರು ನಿತ್ಯವೂ ಪ್ರತಿಭಟನೆ ನಡೆಸುತ್ತಿದ್ದರು. ಇತ್ತೀಚೆಗೆ ಎಂತಹದೇ ಮಳೆ ಬಂದರೂ ರಸ್ತೆ ಹಾಳಾಗುತ್ತಿಲ್ಲ. ಈ ಬಗ್ಗೆ ಒಂದು ದೂರು ಬಂದಿಲ್ಲ’ ಎಂದು ಹೇಳಿದರು.</p>.<p>‘ವಿನೋಬನಗರದ 1 ಮತ್ತು 2ನೇ ಮುಖ್ಯರಸ್ತೆಯನ್ನು ಪಿ.ಬಿ.ರಸ್ತೆಯವರೆಗೆ ಅಭಿವೃದ್ಧಿಪಡಿಸಲಾಗುತ್ತಿದೆ. ಚರಂಡಿ ನಿರ್ಮಾಣ, ರಸ್ತೆ ವಿಸ್ತರಣೆ ಮಾಡಲಾಗುತ್ತಿದೆ. ವಿದ್ಯುತ್ ಮಾರ್ಗ ಮೇಲ್ದರ್ಜೆಗೆ ಏರಿಸಿದ್ದರೆ ಅನುಕೂಲವಾಗುತ್ತಿತ್ತು. ಕಾಂಕ್ರೀಟ್ ರಸ್ತೆ, ವೈಟ್ ಟ್ಯಾಪಿಂಗ್ ಬಗ್ಗೆ ಮುಂದೆ ಆಲೋಚಿಸಲಾಗುವುದು’ ಎಂದು ಹೇಳಿದರು.</p>.<p>‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಮೇಯರ್ ವಿನಾಯಕ ಪೈಲ್ವಾನ್, ಪಾಲಿಕೆ ಸದಸ್ಯ ನಾಗರಾಜ್, ಆಯುಕ್ತೆ ರೇಣುಕಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>