ಸಂತೋಷ್ ಪಾಟೀಲ ಪ್ರಕರಣದಲ್ಲಿ ರಾಜಕೀಯ ಪ್ರೇರಿತ ಎಫ್ಐಆರ್ ದಾಖಲಾಗಿದೆ. ಅದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುಷ್ಟೇ ಇದೆ. ಭ್ರಷ್ಟಾಚಾರದ ಬಗ್ಗೆ ದಾಖಲಾಗಿಲ್ಲ. ಹಾಗಾಗಿ ಸಂತೋಷ್ ಪಾಟೀಲ ಅವರ ಡೆತ್ನೋಟ್ ಆಧಾರದಲ್ಲಿ ಲಂಚ ಪ್ರಕರಣ ಎನ್ನುವುದನ್ನು ಸೇರಿಸಿ ಎಫ್ಐಆರ್ ದಾಖಲಿಸಬೇಕು. ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸಬೇಕು. ಪಾಟೀಲ ಕುಟುಂಬಕ್ಕೆ ₹ 1 ಕೋಟಿ ಪರಿಹಾರ, ಒಂದು ಉದ್ಯೋಗ ನೀಡಬೇಕು. ಬಾಕಿ ಇರುವ ಗುತ್ತಿಗೆಯ ಹಣ ನೀಡಬೇಕು ಎಂದು ಆಗ್ರಹಿಸಿದರು.