ದಾವಣಗೆರೆ:ಈಚೆಗೆ ಸುರಿದ ಮಳೆಯಿಂದ ಹಾಳಾಗಿರುವ ಮಾಯಕೊಂಡ ವಿಧಾನಸಭಾ ಕ್ಷೇತ್ರದ ನಲ್ಕುಂದ ಗ್ರಾಮದ ಬಳಿ ಭದ್ರಾ ನಾಲೆಯ ದುರಸ್ತಿಗೆಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಲಾಗಿದ್ದು, ದುರಸ್ತಿಗೆ ಮಾಡುವ ಭರವಸೆ ನೀಡಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಸಂಸದರು ಜಿಲ್ಲೆಯಲ್ಲಿ ಹಾಳಾದ ನಾಲೆಗಳ ಬಗ್ಗೆ ತಿಳಿಸಿ, ದುರಸ್ತಿ ಬಗ್ಗೆ ಮನವರಿಕೆ ಮಾಡಿದರು.
ಹರಿಹರ ತಾಲ್ಲೂಕಿನ ದೇವರಬೆಳಕೆರೆ ಡ್ಯಾಂನ ಪಿಕಪ್ ನಾಲೆಗಳೂ ಹಾಳಾಗಿ ರೈತರಿಗೆ ತೊಂದರೆಯಾಗಿದೆ. ಈ ಎರಡೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಂಸದರು ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಗೋವಿಂದ ಕಾರಜೋಳ ಶೀಘ್ರ ಪರಿಹಾರ ಒದಗಿಸುವ ಭರವಸೆ ನೀಡಿದರು.