<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ 2021 ರಿಂದ 2025 ರವರೆಗೆ 497 ಮಕ್ಕಳು ಕಾಣೆಯಾದ ಪ್ರಕರಣ ದಾಖಲಾಗಿದ್ದು, 478 ಮಕ್ಕಳು ಪತ್ತೆಯಾಗಿವೆ. ಇನ್ನೂ 19 ಪ್ರಕರಣಗಳು ಬಾಕಿ ಉಳಿದಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೂಚಿಸಿದರು.</p>.<p>ನಗರದ ಜಿಲ್ಲಾ ಪೊಲೀಸ್ ಭವನದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚನ್ನಗಿರಿ, ಹೊನ್ನಾಳಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಕ್ಕಳು ಆರೋಗ್ಯವಂತರಾಗಿರುವುದರ ಜೊತೆಗೆ ಸುರಕ್ಷಿತವಾಗಿರಬೇಕು. ಕಾಣೆಯಾದ ಮಕ್ಕಳನ್ನು ಶೀಘ್ರ ಪತ್ತೆ ಮಾಡಬೇಕು. ಪೋಕ್ಸೊ ಕಾಯ್ದೆಯ ಭೀತಿಯಿಂದ ಜನರು ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುತ್ತೇವೆ’ ಎಂಬ ಭರವಸೆ ನೀಡಿದರು.</p>.<p>‘ಮಕ್ಕಳಿಗೆ ನ್ಯಾಯ ಕೊಡಿಸುವ ಪ್ರವೃತ್ತಿಯನ್ನು ಅಧಿಕಾರಿಗಳು ಬೆಳೆಸಿಕೊಳ್ಳಬೇಕು. ಕಾಣೆಯಾದ ಮಕ್ಕಳ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಯಾರೊಬ್ಬರು ಮಾಡಬಾರದು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಬೇಕು’ ಎಂದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ್, ‘ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಸಹಾಯ ಪಡೆದರೆ ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ ಪಡೆಯಬಹುದು. ಮಕ್ಕಳು ಎಲ್ಲಿ ಹೋಗಿರಬಹುದು ಎಂಬ ಮಾಹಿತಿಯನ್ನು ಪಾಲಕರು ತಿಳಿಸಿದರೆ ಅನುಕೂಲ’ ಎಂದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಡಿವೈಎಸ್ಪಿ ಶರಣಬಸಪ್ಪ, ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲೆಯಲ್ಲಿ 2021 ರಿಂದ 2025 ರವರೆಗೆ 497 ಮಕ್ಕಳು ಕಾಣೆಯಾದ ಪ್ರಕರಣ ದಾಖಲಾಗಿದ್ದು, 478 ಮಕ್ಕಳು ಪತ್ತೆಯಾಗಿವೆ. ಇನ್ನೂ 19 ಪ್ರಕರಣಗಳು ಬಾಕಿ ಉಳಿದಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸೂಚಿಸಿದರು.</p>.<p>ನಗರದ ಜಿಲ್ಲಾ ಪೊಲೀಸ್ ಭವನದ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಣೆಯಾದ ಮಕ್ಕಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚನ್ನಗಿರಿ, ಹೊನ್ನಾಳಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಮಕ್ಕಳು ಆರೋಗ್ಯವಂತರಾಗಿರುವುದರ ಜೊತೆಗೆ ಸುರಕ್ಷಿತವಾಗಿರಬೇಕು. ಕಾಣೆಯಾದ ಮಕ್ಕಳನ್ನು ಶೀಘ್ರ ಪತ್ತೆ ಮಾಡಬೇಕು. ಪೋಕ್ಸೊ ಕಾಯ್ದೆಯ ಭೀತಿಯಿಂದ ಜನರು ಪೊಲೀಸರಿಗೆ ಮಾಹಿತಿ ನೀಡುತ್ತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುತ್ತೇವೆ’ ಎಂಬ ಭರವಸೆ ನೀಡಿದರು.</p>.<p>‘ಮಕ್ಕಳಿಗೆ ನ್ಯಾಯ ಕೊಡಿಸುವ ಪ್ರವೃತ್ತಿಯನ್ನು ಅಧಿಕಾರಿಗಳು ಬೆಳೆಸಿಕೊಳ್ಳಬೇಕು. ಕಾಣೆಯಾದ ಮಕ್ಕಳ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಯಾರೊಬ್ಬರು ಮಾಡಬಾರದು. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಪತ್ತೆ ಹಚ್ಚಲು ಸಾಧ್ಯವಾಗದ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಬೇಕು’ ಎಂದರು.</p>.<p>ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರೆಣ್ಣನವರ್, ‘ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಸಹಾಯ ಪಡೆದರೆ ಕಾಣೆಯಾದ ಮಕ್ಕಳ ಬಗ್ಗೆ ಮಾಹಿತಿ ಪಡೆಯಬಹುದು. ಮಕ್ಕಳು ಎಲ್ಲಿ ಹೋಗಿರಬಹುದು ಎಂಬ ಮಾಹಿತಿಯನ್ನು ಪಾಲಕರು ತಿಳಿಸಿದರೆ ಅನುಕೂಲ’ ಎಂದರು.</p>.<p>ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ್ ಹೆಗಡೆ, ಡಿವೈಎಸ್ಪಿ ಶರಣಬಸಪ್ಪ, ಮಕ್ಕಳ ರಕ್ಷಣಾಧಿಕಾರಿ ಟಿ.ಎನ್.ಕವಿತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>