ಬೈಕ್ ಸವಾರರು ಹರಪನಹಳ್ಳಿಯವರು. ಅಪಘಾತದಿಂದಾಗಿ ಬೈಕ್ ಸವಾರ ಮತ್ತು ಹಿಂಬದಿ ಸವಾರ ರಸ್ತೆ ಬದಿಯಲ್ಲಿ ನರಳುತ್ತಾ ಬಿದ್ದಿದ್ದರು. ಈ ಸಮಯದಲ್ಲಿ ಸಂತೇಬೆನ್ನೂರು ಕಡೆಯಿಂದ ಕಾರಿನಲ್ಲಿ ಬರುತ್ತಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕಾರನ್ನು ನಿಲ್ಲಿಸಿ, ಗಾಯಾಳುಗಳ ಬಳಿ ತೆರಳಿ ತಕ್ಷಣ ದೇವರಹಳ್ಳಿಯಿಂದ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದರು. ನಂತರ ಆಂಬುಲೆನ್ಸ್ ತರಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಈ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.