ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅತೃಪ್ತ ಶಾಸಕರು ಗುರುವಾರ ಸಭೆ ನಡೆಸಿದ್ದು, ಅದರಲ್ಲಿ ನಾನು ಭಾಗವಹಿಸಿದ್ದೆ ಎಂದು ವರದಿಯಾಗಿದೆ. ನಾನು ಯಾವುದೇ ಸಭೆಯಲ್ಲಿ ಭಾಗವಹಿಸಿಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದ್ರೋಹ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ಯಡಿಯೂರಪ್ಪ ನನಗೆ ತಂದೆ ಸಮಾನ. ನನ್ನ ರಾಜಕೀಯ ಗುರು. ಯಾವುದೇ ಅತೃಪ್ತ ಶಾಸಕರ ಜತೆ ಸೇರಿಲ್ಲ. ಸೇರುವುದೂ ಇಲ್ಲ’ ಎಂದು ಹೇಳಿದರು.