‘ಭದ್ರಾ ಜಲಾಶಯದ ನೀರಿನ ಮಟ್ಟವು 156 ಅಡಿಗಳಿಗೆ ತಲುಪಿದೆ. ಜಲಾನಯನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, 45 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ದಾವಣಗೆರೆ, ಹರಿಹರ, ಹರಪನಹಳ್ಳಿ, ಹೊನ್ನಾಳಿ, ಚನ್ನಗಿರಿ ಹಾಗೂ ಭದ್ರಾವತಿ ಭಾಗದ ರೈತರು ಕಾಲುವೆ ನೀರಿಗಾಗಿ ಕಾಯುತ್ತಿದ್ದಾರೆ. ಮಳೆ ನೀರು ಹಾಗೂ ಕೊಳವೆಬಾವಿಯ ನೀರಿನಿಂದ ಭತ್ತ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಹೀಗಾಗಿ ಕೂಡಲೇ ಎಡ ಹಾಗೂ ಬಲ ಕಾಲುವೆಗಳಿಗೆ ನೀರು ಹರಿಸಲು ಆದೇಶಿಸಬೇಕು’ ಎಂದು ಮನವಿ ಮಾಡಿದರು.