<p>ನ್ಯಾಮತಿ: ಸಮಸ್ಯೆಗಳನ್ನು ಹೊತ್ತು ಕಚೇರಿಗೆ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ತಾಕೀತು ಮಾಡಿದರು. </p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಜಾಗ ನೀಡುವಂತೆ ಹಾಗೂ ಹಾಲಿ ಇರುವ ಸ್ಮಶಾನ ಜಾಗದ ಅಳತೆ ನಿಗದಿಗೊಳಿಸಿ ಮೂಲ ಸೌಲಭ್ಯ ಕಲ್ಪಿಸುವಂತೆ ದಲಿತ ಮುಖಂಡರು ಮನವಿ ಮಾಡಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಗಮನಹರಿಸಬೇಕು ಎಂದು ಸೂಚಿಸಿದರು. </p>.<p>ಸಾವಿರ ಜನ ಕುಳಿತುಕೊಳ್ಳಬಲ್ಲ ಸುಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂದು ಬೆಳಗುತ್ತಿ ರಂಗನಾಥ ಮನವಿ ಮಾಡಿದರು.</p>.<p>ಸಂತ ಸೇವಾಲಾಲ್ ಜನ್ಮಸ್ಥಾನ ಭಾಯಗಡ್ಗೆ ವಿವಿಧೆಡೆಯಿಂದ ಭಕ್ತರು ಬರುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಸವಳಂಗದಲ್ಲಿ ಬಂಜಾರ ಭವನ ನಿರ್ಮಾಣ ಮಾಡಬೇಕು ಎಂದು ದೂದ್ಯಾನಾಯ್ಕ ದೂರಿದರು. </p>.<p>ಬೆಳಲಕಟ್ಟೆ-ಜಯನಗರದಲ್ಲಿರುವ ಸ್ಮಶಾನವನ್ನು ಅಭಿವೃದ್ಧಿಪಡಿಸಬೇಕು. ಬೆಳಗುತ್ತಿ ಸ್ಮಶಾನ ಜಾಗ ಹದ್ದುಬಸ್ತು, ಯಲ್ಲಾಪುರದ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡಿರುವವರಿಗೆ ಭೂಮಿ ಮಂಜೂರು ಮಾಡಬೇಕು. ಚಿನ್ನಿಕಟ್ಟೆಯಲ್ಲಿರುವ 2 ಎಕರೆ ಖಬರಸ್ಥಾನ ಜಾಗದಲ್ಲಿ 1 ಎಕರೆ ಒತ್ತುವರಿಯಾಗಿದ್ದು, ಅದನ್ನು ಬಿಡಿಸಿಕೊಡಬೇಕು. ನ್ಯಾಮತಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿ ಮನೆ ಕಟ್ಟಿಸಿಕೊಡಬೇಕು ಎಂದು ಚಿನ್ನಿಕಟ್ಟೆ ರೆಹಮಾನ್ ಮನವಿ ಸಲ್ಲಿಸಿದರು.</p>.<p>ಸವಳಂಗ, ಯರಗನಾಳ್, ಸಾಲಬಾಳು, ಟಿ.ಗೋಪಗೊಂಡನಹಳ್ಳಿ, ಹೊಸಕೊಪ್ಪ, ಬಸವನಹಳ್ಳಿ, ಗೋವಿನಕೋವಿ ಗ್ರಾಮಗಳಲ್ಲಿನ ಸಮಸ್ಯೆಯನ್ನು ಮುಖಂಡರು ಸಭೆಯ ಗಮನಕ್ಕೆ ತಂದರು.</p>.<p>ಪರಿಶಿಷ್ಟರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮಾದಿಗ ದಂಡೋರ ಸಮಿತಿಯ ಕೆಂಚಿಕೊಪ್ಪ ಮಂಜಪ್ಪ ಮನವಿ ಮಾಡಿದರು. </p>.<p>ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ ಮತ್ತು ಹದ್ದುಬಸ್ತು ಆಗಿಲ್ಲ ಅಂತಹವುಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚನೆ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಅವರಿಗೆ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಸೂಚಿಸಿದರು. </p>.<p>ಸಭೆಯಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ರಾಘವೇಂದ್ರ, ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಹಾಗೂ ತಾಲ್ಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಮತ್ತು ದಲಿತ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. </p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎಲ್.ಉಮಾ ಸಭೆಯನ್ನು ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ಸಮಸ್ಯೆಗಳನ್ನು ಹೊತ್ತು ಕಚೇರಿಗೆ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸೂಕ್ತ ಪರಿಹಾರ ಒದಗಿಸಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ತಾಕೀತು ಮಾಡಿದರು. </p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿತರಕ್ಷಣಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಸ್ಮಶಾನ ಜಾಗ ನೀಡುವಂತೆ ಹಾಗೂ ಹಾಲಿ ಇರುವ ಸ್ಮಶಾನ ಜಾಗದ ಅಳತೆ ನಿಗದಿಗೊಳಿಸಿ ಮೂಲ ಸೌಲಭ್ಯ ಕಲ್ಪಿಸುವಂತೆ ದಲಿತ ಮುಖಂಡರು ಮನವಿ ಮಾಡಿದ್ದು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಗಮನಹರಿಸಬೇಕು ಎಂದು ಸೂಚಿಸಿದರು. </p>.<p>ಸಾವಿರ ಜನ ಕುಳಿತುಕೊಳ್ಳಬಲ್ಲ ಸುಜ್ಜಿತವಾದ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂದು ಬೆಳಗುತ್ತಿ ರಂಗನಾಥ ಮನವಿ ಮಾಡಿದರು.</p>.<p>ಸಂತ ಸೇವಾಲಾಲ್ ಜನ್ಮಸ್ಥಾನ ಭಾಯಗಡ್ಗೆ ವಿವಿಧೆಡೆಯಿಂದ ಭಕ್ತರು ಬರುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಸವಳಂಗದಲ್ಲಿ ಬಂಜಾರ ಭವನ ನಿರ್ಮಾಣ ಮಾಡಬೇಕು ಎಂದು ದೂದ್ಯಾನಾಯ್ಕ ದೂರಿದರು. </p>.<p>ಬೆಳಲಕಟ್ಟೆ-ಜಯನಗರದಲ್ಲಿರುವ ಸ್ಮಶಾನವನ್ನು ಅಭಿವೃದ್ಧಿಪಡಿಸಬೇಕು. ಬೆಳಗುತ್ತಿ ಸ್ಮಶಾನ ಜಾಗ ಹದ್ದುಬಸ್ತು, ಯಲ್ಲಾಪುರದ ಅರಣ್ಯಭೂಮಿಯಲ್ಲಿ ಸಾಗುವಳಿ ಮಾಡಿರುವವರಿಗೆ ಭೂಮಿ ಮಂಜೂರು ಮಾಡಬೇಕು. ಚಿನ್ನಿಕಟ್ಟೆಯಲ್ಲಿರುವ 2 ಎಕರೆ ಖಬರಸ್ಥಾನ ಜಾಗದಲ್ಲಿ 1 ಎಕರೆ ಒತ್ತುವರಿಯಾಗಿದ್ದು, ಅದನ್ನು ಬಿಡಿಸಿಕೊಡಬೇಕು. ನ್ಯಾಮತಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ ಅಡಿ ಮನೆ ಕಟ್ಟಿಸಿಕೊಡಬೇಕು ಎಂದು ಚಿನ್ನಿಕಟ್ಟೆ ರೆಹಮಾನ್ ಮನವಿ ಸಲ್ಲಿಸಿದರು.</p>.<p>ಸವಳಂಗ, ಯರಗನಾಳ್, ಸಾಲಬಾಳು, ಟಿ.ಗೋಪಗೊಂಡನಹಳ್ಳಿ, ಹೊಸಕೊಪ್ಪ, ಬಸವನಹಳ್ಳಿ, ಗೋವಿನಕೋವಿ ಗ್ರಾಮಗಳಲ್ಲಿನ ಸಮಸ್ಯೆಯನ್ನು ಮುಖಂಡರು ಸಭೆಯ ಗಮನಕ್ಕೆ ತಂದರು.</p>.<p>ಪರಿಶಿಷ್ಟರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮಾದಿಗ ದಂಡೋರ ಸಮಿತಿಯ ಕೆಂಚಿಕೊಪ್ಪ ಮಂಜಪ್ಪ ಮನವಿ ಮಾಡಿದರು. </p>.<p>ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಜಾಗ ಇಲ್ಲ ಮತ್ತು ಹದ್ದುಬಸ್ತು ಆಗಿಲ್ಲ ಅಂತಹವುಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ಸೂಚನೆ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಘವೇಂದ್ರ ಅವರಿಗೆ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಸೂಚಿಸಿದರು. </p>.<p>ಸಭೆಯಲ್ಲಿ ತಹಶೀಲ್ದಾರ್ ಎಚ್.ಬಿ.ಗೋವಿಂದಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ. ರಾಘವೇಂದ್ರ, ಪೊಲೀಸ್ ಇನ್ಸ್ಪೆಕ್ಟರ್ ಎನ್.ಎಸ್.ರವಿ ಹಾಗೂ ತಾಲ್ಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಮತ್ತು ದಲಿತ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. </p>.<p>ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್.ಎಲ್.ಉಮಾ ಸಭೆಯನ್ನು ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>