<p><strong>ಹುಬ್ಬಳ್ಳಿ: </strong>ನಗರದ ಭೈರಿದೇವರಕೊಪ್ಪದ ಸಂಗೊಳ್ಳಿ ರಾಯಣ್ಣ ನಗರ ಹಾಗೂ ವಿಜಯನಗರದ ರೆವೆನ್ಯೂ ಕಾಲೊನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯಗಳನ್ನು ಶಾಸಕ ಜಗದೀಶ ಶೆಟ್ಟರ್ ಮಂಗಳವಾರ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಸರ್ಕಾರ ನಿರ್ಮಿಸಿರುವ ಹಾಸ್ಟೆಲ್ಗಳ ಪ್ರಯೋಜನ ಪಡೆದುಕೊಂಡು ಚೆನ್ನಾಗಿ ಓದಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ–ತಾಯಿ, ಗುರುಗಳಿಗೆ ಗೌರವ ತರಬೇಕು. ಆಗ, ಸರ್ಕಾರಿ ಸೌಲಭ್ಯಗಳಿಗೆ ಸಾರ್ಥಕತೆ ಬರಲಿದೆ’ ಎಂದು ಹೇಳಿದರು.</p>.<p>ಹಾಸ್ಟೆಲ್ನ ಕೊಠಡಿ ಹಾಗೂ ಭೋಕನಾಲಯ ಪರಿಶೀಲಿಸಿದ ಶೆಟ್ಟರ್, ಸೌಲಭ್ಯಗಳ ಕುರಿತು ವಿದ್ಯಾರ್ಥಿನಿಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂಗೊಳ್ಳಿ ರಾಯಣ್ಣ ನಗರದಲ್ಲಿ ₹3 ಕೋಟಿ ವೆಚ್ಚದಲ್ಲಿ ಹಾಗೂ ರೆವೆನ್ಯೂ ಕಾಲೊನಿಯಲ್ಲಿ ₹2.75 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಶೇಖರ ಕರವೀರಮಠ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಎಂ.ಬಿ. ಗುಂಡೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ನಗರದ ಭೈರಿದೇವರಕೊಪ್ಪದ ಸಂಗೊಳ್ಳಿ ರಾಯಣ್ಣ ನಗರ ಹಾಗೂ ವಿಜಯನಗರದ ರೆವೆನ್ಯೂ ಕಾಲೊನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯಗಳನ್ನು ಶಾಸಕ ಜಗದೀಶ ಶೆಟ್ಟರ್ ಮಂಗಳವಾರ ಉದ್ಘಾಟಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಸರ್ಕಾರ ನಿರ್ಮಿಸಿರುವ ಹಾಸ್ಟೆಲ್ಗಳ ಪ್ರಯೋಜನ ಪಡೆದುಕೊಂಡು ಚೆನ್ನಾಗಿ ಓದಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ತಂದೆ–ತಾಯಿ, ಗುರುಗಳಿಗೆ ಗೌರವ ತರಬೇಕು. ಆಗ, ಸರ್ಕಾರಿ ಸೌಲಭ್ಯಗಳಿಗೆ ಸಾರ್ಥಕತೆ ಬರಲಿದೆ’ ಎಂದು ಹೇಳಿದರು.</p>.<p>ಹಾಸ್ಟೆಲ್ನ ಕೊಠಡಿ ಹಾಗೂ ಭೋಕನಾಲಯ ಪರಿಶೀಲಿಸಿದ ಶೆಟ್ಟರ್, ಸೌಲಭ್ಯಗಳ ಕುರಿತು ವಿದ್ಯಾರ್ಥಿನಿಯರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂಗೊಳ್ಳಿ ರಾಯಣ್ಣ ನಗರದಲ್ಲಿ ₹3 ಕೋಟಿ ವೆಚ್ಚದಲ್ಲಿ ಹಾಗೂ ರೆವೆನ್ಯೂ ಕಾಲೊನಿಯಲ್ಲಿ ₹2.75 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.</p>.<p>ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸರೋಜಾ ಹಳಕಟ್ಟಿ, ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಚಂದ್ರಶೇಖರ ಕರವೀರಮಠ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ, ಎಂ.ಬಿ. ಗುಂಡೂರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>