‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಚಿತ್ರದುರ್ಗ, ತುಮಕೂರು, ದಾವಣಗೆರೆ ಹಾಗೂ ಶಿವಮೊಗ್ಗದ ಕೆಲಭಾಗಗಳಲ್ಲಿ ಮುಟ್ಟು, ಹೆರಿಗೆ ಆದ ಮಹಿಳೆಯರನ್ನು ಗ್ರಾಮದಿಂದ ಹೊರಗೆ ಇಡುವ ಪದ್ಧತಿ ಜಾರಿಯಲ್ಲಿದೆ. ಹಿಂದಿನ ಕಾಲದಲ್ಲಿ ಸೌಕರ್ಯಗಳಿಲ್ಲದ ಕಾರಣ ಇದು ರೂಢಿಯಲ್ಲಿರಬಹುದು. ಈಗಾಗಲೇ ರಾಜ್ಯದಾದ್ಯಂತ ಸಂಚರಿಸಿ ಶೇ 50ರಷ್ಟು ಗೊಲ್ಲರಹಟ್ಟಿಗಳಲ್ಲಿ ಈ ಕಂದಾಚಾರವನ್ನು ಬಿಡಿಸಿದ್ದೇನೆ. ಕೆಲವರು ಸ್ವಯಂ ಪ್ರೇರಿತರಾಗಿ ಬಿಟ್ಟಿದ್ದಾರೆ’ ಎಂದು ತಿಳಿಸಿದರು.