<p><strong>ದಾವಣಗೆರೆ</strong>: ‘ಕಾಂಗ್ರೆಸ್ ಸರ್ಕಾರವು ಅಹಿಂದ ಹೆಸರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಹಿಂದ ವರ್ಗಕ್ಕೆ ನಿಜವಾದ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದರು. </p><p>‘3 ವರ್ಷಗಳ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಹಿಂದ ಸಮುದಾಯಗಳಿಗೆ ಸೇರಿದ ವಿವಿಧ ನಿಗಮಗಳಿಗೆ ಅನುದಾನ ಘೋಷಣೆ ಮಾಡಲಾಗಿದೆ. ಆದರೆ, ಬಿಡುಗಡೆ ಮಾಡಿಲ್ಲ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. </p><p>‘ಸರ್ಕಾರ ಘೋಷಿಸಿದ ಮತ್ತು ಬಿಡುಗಡೆ ಮಾಡಿದ ಅನುದಾನಗಳ ನಡುವೆ ದೊಡ್ಡ ದೊಡ್ಡ ಅಂತರವಿದೆ. 2025-26ನೇ ಸಾಲಿನಲ್ಲಿ ಒಟ್ಟು ₹ 716 ಕೋಟಿ ಘೋಷಿಸಿ, ₹ 413 ಕೋಟಿ ಮಾತ್ರ ಬಿಡುಗಡೆ ಮಾಡಿದೆ’ ಎಂದರು. </p><p>‘ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ₹ 155 ಕೋಟಿ ಘೋಷಿಸಿ ₹ 89 ಕೋಟಿ ಬಿಡುಗಡೆ ಮಾಡಿದೆ. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ₹ 51 ಕೋಟಿಯಲ್ಲಿ ₹ 29.63 ಕೋಟಿ, ಭೋವಿ ನಿಗಮಕ್ಕೆ ₹ 93.5 ಕೋಟಿಯಲ್ಲಿ ₹ 68.81 ಕೋಟಿ ಹಾಗೂ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ₹ 220 ಕೋಟಿಯಲ್ಲಿ ₹ 93 ಕೋಟಿ ಮಾತ್ರ ಬಿಡುಗಡೆ ಮಾಡಿದೆ’ ಎಂದು ಹೇಳಿದರು. </p><p>‘ತಾಂಡಾ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿಯಲ್ಲಿ ₹ 73 ಕೋಟಿ, ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿಯಲ್ಲಿ ₹ 35 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಸರ್ಕಾರದ ವೈಫಲ್ಯವನ್ನು ಇದು ತೋರಿಸುತ್ತದೆ’ ಎಂದರು. </p><p>‘ಕಾಂಗ್ರೆಸ್ ಸರ್ಕಾರ ಬಜೆಟ್ನಲ್ಲಿ 56,000 ಹುದ್ದೆಗಳ ನೇಮಕಾತಿ ಬಗ್ಗೆ ತಿಳಿಸಿದೆ. ಆದರೆ, ಅನುದಾನ ಮೀಸಲಿಟ್ಟಿಲ್ಲ. 93,000 ಹೊರಗುತ್ತಿಗೆ ನೌಕರರನ್ನು ಕೈಬಿಡುವ ಯತ್ನವನ್ನು ಸರ್ಕಾರ ಮಾಡುತ್ತಿದೆ. ಇದರಿಂದ ಆಡಳಿತ ವ್ಯವಸ್ಥೆಯೇ ಕುಸಿಯಲಿದೆ’ ಎಂದು ಎಚ್ಚರಿಸಿದರು. </p><p>‘ಅಹಿಂದ ವರ್ಗದ ಹಿತಾಸಕ್ತಿಯನ್ನು ಕಾಪಾಡಲು ವಿಫಲವಾಗಿರುವ ಸರ್ಕಾರವನ್ನು ಜನರು ತಿರಸ್ಕರಿಸಬೇಕು’ ಎಂದು ಮನವಿ ಮಾಡಿದರು. </p><p>ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇನ್ನಿತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಕಾಂಗ್ರೆಸ್ ಸರ್ಕಾರವು ಅಹಿಂದ ಹೆಸರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಅಹಿಂದ ವರ್ಗಕ್ಕೆ ನಿಜವಾದ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆರೋಪಿಸಿದರು. </p><p>‘3 ವರ್ಷಗಳ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಹಿಂದ ಸಮುದಾಯಗಳಿಗೆ ಸೇರಿದ ವಿವಿಧ ನಿಗಮಗಳಿಗೆ ಅನುದಾನ ಘೋಷಣೆ ಮಾಡಲಾಗಿದೆ. ಆದರೆ, ಬಿಡುಗಡೆ ಮಾಡಿಲ್ಲ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. </p><p>‘ಸರ್ಕಾರ ಘೋಷಿಸಿದ ಮತ್ತು ಬಿಡುಗಡೆ ಮಾಡಿದ ಅನುದಾನಗಳ ನಡುವೆ ದೊಡ್ಡ ದೊಡ್ಡ ಅಂತರವಿದೆ. 2025-26ನೇ ಸಾಲಿನಲ್ಲಿ ಒಟ್ಟು ₹ 716 ಕೋಟಿ ಘೋಷಿಸಿ, ₹ 413 ಕೋಟಿ ಮಾತ್ರ ಬಿಡುಗಡೆ ಮಾಡಿದೆ’ ಎಂದರು. </p><p>‘ಅಂಬೇಡ್ಕರ್ ಅಭಿವೃದ್ಧಿ ನಿಗಮಕ್ಕೆ ₹ 155 ಕೋಟಿ ಘೋಷಿಸಿ ₹ 89 ಕೋಟಿ ಬಿಡುಗಡೆ ಮಾಡಿದೆ. ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ₹ 51 ಕೋಟಿಯಲ್ಲಿ ₹ 29.63 ಕೋಟಿ, ಭೋವಿ ನಿಗಮಕ್ಕೆ ₹ 93.5 ಕೋಟಿಯಲ್ಲಿ ₹ 68.81 ಕೋಟಿ ಹಾಗೂ ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ₹ 220 ಕೋಟಿಯಲ್ಲಿ ₹ 93 ಕೋಟಿ ಮಾತ್ರ ಬಿಡುಗಡೆ ಮಾಡಿದೆ’ ಎಂದು ಹೇಳಿದರು. </p><p>‘ತಾಂಡಾ ಅಭಿವೃದ್ಧಿ ನಿಗಮಕ್ಕೆ ₹ 100 ಕೋಟಿಯಲ್ಲಿ ₹ 73 ಕೋಟಿ, ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿಯಲ್ಲಿ ₹ 35 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಸರ್ಕಾರದ ವೈಫಲ್ಯವನ್ನು ಇದು ತೋರಿಸುತ್ತದೆ’ ಎಂದರು. </p><p>‘ಕಾಂಗ್ರೆಸ್ ಸರ್ಕಾರ ಬಜೆಟ್ನಲ್ಲಿ 56,000 ಹುದ್ದೆಗಳ ನೇಮಕಾತಿ ಬಗ್ಗೆ ತಿಳಿಸಿದೆ. ಆದರೆ, ಅನುದಾನ ಮೀಸಲಿಟ್ಟಿಲ್ಲ. 93,000 ಹೊರಗುತ್ತಿಗೆ ನೌಕರರನ್ನು ಕೈಬಿಡುವ ಯತ್ನವನ್ನು ಸರ್ಕಾರ ಮಾಡುತ್ತಿದೆ. ಇದರಿಂದ ಆಡಳಿತ ವ್ಯವಸ್ಥೆಯೇ ಕುಸಿಯಲಿದೆ’ ಎಂದು ಎಚ್ಚರಿಸಿದರು. </p><p>‘ಅಹಿಂದ ವರ್ಗದ ಹಿತಾಸಕ್ತಿಯನ್ನು ಕಾಪಾಡಲು ವಿಫಲವಾಗಿರುವ ಸರ್ಕಾರವನ್ನು ಜನರು ತಿರಸ್ಕರಿಸಬೇಕು’ ಎಂದು ಮನವಿ ಮಾಡಿದರು. </p><p>ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಇನ್ನಿತರ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>