‘ಮತ್ತೆ ಈಜುಕೊಳ ಚಟುವಟಿಕೆಯ ಕೇಂದ್ರವಾಗಬೇಕು ಎಂಬ ಕಾರಣದಿಂದ ಸರ್ಕಾರಕ್ಕೆ, ನಮ್ಮ ಇಲಾಖೆಯ ಮೇಲಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದೆ. ಈಗ ಸ್ಮಾರ್ಟ್ಸಿಟಿ ಯೋಜನೆಯಡಿ ಆಧುನಿಕ ಸ್ಪರ್ಶ ನೀಡುವ ಕೆಲಸ ಆರಂಭಗೊಂಡಿದೆ. ಇನ್ನು ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.