ದಾವಣಗೆರೆ: ‘ನಾವು ₹18,172 ಕೋಟಿ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದೆವು. ಆದರೆ ಕೇಂದ್ರ ₹3,454 ಕೋಟಿ ನೀಡಿದೆ. ಇದು ಯಾವುದಕ್ಕೂ ಸಾಲದು. ಉಳಿದುದ್ದನ್ನು ಶೀಘ್ರವೇ ಬಿಡುಗಡೆ ಮಾಡದಿದ್ದರೆ ಸೋಮವಾರ ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.