‘ಪಿತ್ರಾರ್ಜಿತ ಆಸ್ತಿ ತೆರಿಗೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಅಲ್ಪಸಂಖ್ಯಾತರನ್ನು ಓಲೈಸುವ ರಾಜಕಾರಣದ ಮುಂದಿನ ಹಂತವಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಆಸ್ತಿಯ ಸಮಾನ ಹಂಚಿಕೆಯ ಉದ್ದೇಶ ಇತ್ತು. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ರಾಹುಲ್ಗಾಂಧಿ, ಕಾಂಗ್ರೆಸ್ ಮುಖಂಡರ ಮನಸ್ಸಿನಲ್ಲಿ ಇರುವುದನ್ನು ಸ್ಯಾಮ್ ಪಿತ್ರೋಡಾ ಮೂಲಕ ಹೇಳಿಸುತ್ತಿದ್ದಾರೆ’ ಎಂದು ಸುದ್ದಿಗಾರರೆದುರು ದೂರಿದರು.