ಜಾಕ್ವೆಲ್ ಹೊಲಗಳನ್ನು ನೀಡಿರುವ ರೈತರ ಕುಟುಂಬದವರು ಈ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ನಿಗದಿತ ಸಮಯದಲ್ಲಿ ವೇತನ ನೀಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ. ನಿರಂತರ ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೆರೆಗಳಿಗೆ ನೀರು ತಂಬಿಸುವುದರಿಂದ ಮಳೆಗಾಲದಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿದ್ದ ನದಿ ನೀರಿನ ಸದ್ಬಳಕೆಯಾಗುವ ಜತೆಗೆ ಬರಗಾಲದಿಂದ ತತ್ತರಿಸುತ್ತಿರುವ ಗ್ರಾಮಗಳ ರೈತರ ಬದುಕು ಹಸನಾಗುತ್ತದೆ ಎಂದು ಹೇಳಿದರು.