ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಲ್.ಡಿ. ವೆಂಕಟೇಶ್, ‘ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಆನೆಕಾಲು, ಚಿಕೂನ್ಗುನ್ಯ ಹರಡುತ್ತದೆ. ಮಳೆಗಾಲದಲ್ಲಿ ತಗ್ಗುಪ್ರದೇಶ ಇನ್ನಿತರೆಡೆ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುವುದರಿಂದ ಈ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ನೀರಿನ ಸಂಗ್ರಹಗಳನ್ನು ಸಂಪೂರ್ಣವಾಗಿ ಮುಚ್ಚಬೇಕು. ಸೊಳ್ಳೆ ಕಡಿತದಿಂದ ಮುಕ್ತರಾಗಲು ಸೊಳ್ಳೆಪರದೆ, ಬೇವಿನ ಸೊಪ್ಪಿನ ಹೊಗೆ ಉಪಯೋಗಿಸಬೇಕು. ಮನೆಯ ಸುತ್ತ ಬಿಸಾಡಿದ ತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ಸಂಗ್ರಹ ಆಗದಂತೆ ಎಚ್ಚರವಹಿಸಬೇಕು’ ಎಂದು ವಿವರ ನೀಡಿದರು.