ಶವವನ್ನು ಅಂತ್ಯ ಸಂಸ್ಕಾರ ನಡೆಸಲು ಚಿತಾಗಾರಕ್ಕೆ ತೆಗೆದುಕೊಂಡು ಹೋಗಬೇಕಿತ್ತು. ಆದರೆ ಆಸ್ಪತ್ರೆಯ ಆವರಣದಲ್ಲಿ ಆಂಬುಲೆನ್ಸ್ ಇರಲಿಲ್ಲ. ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಖಾಸಗಿ ಆಂಬುಲೆನ್ಸ್ ಕರೆತಂದಿದ್ದು, ಚಾಲಕ ₹4 ಸಾವಿರ ಕೊಡದೇ ಹೋಗುವುದಿಲ್ಲ ಎಂದು ಪಟ್ಟು ಹಿಡಿದ. ಇದರಿಂದಾಗಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಖಾಸಗಿ ಆಂಬುಲೆನ್ಸ್ನಲ್ಲಿ ಶವ ಇಟ್ಟುಕೊಂಡು ಕಾಯಬೇಕಾದ ಪರಿಸ್ಥಿತಿ ಬಂದಿತು.