<p><strong>ದಾವಣಗೆರೆ</strong>: ಸ್ವಸಹಾಯ ಸಂಘ ಹಾಗೂ ಮೈಕ್ರೊ ಫೈನಾನ್ಸ್ಗಳಲ್ಲಿ ಪಡೆದಿದ್ದ ಸಾಲ ಮರುಪಾವತಿಸಲು ಸಾಧ್ಯವಾಗದ ತಾಯಿ–ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರ ನಗರದ ತುಂಗಭದ್ರಾ ನದಿಯ ರೈಲ್ವೆ ಸೇತುವೆಯ ಮೇಲೆ ಗುರುವಾರ ನಡೆದಿದೆ.</p><p>ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಸುವರ್ಣಮ್ಮ (60) ಹಾಗೂ ಪುತ್ರಿ ಗೌರಮ್ಮ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.</p><p>ಕೂಲಿ ಕಾರ್ಮಿಕರಾದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎಂದು ರೈಲ್ವೆ ಪೊಲೀಸ್ ಠಾಣೆಯ ಮೂಲಗಳು ತಿಳಿಸಿವೆ.</p><p>ಸುವರ್ಣಮ್ಮ ಅವರು ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ ₹ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ವಿಫಲರಾದ ಅವರು ಪುತ್ರಿಯೊಂದಿಗೆ ಜುಲೈ 1ರಂದು ಗ್ರಾಮ ತೊರೆದಿದ್ದರು.</p><p>ಇಬ್ಬರು ಪುತ್ರಿಯರ ಮನೆಯಲ್ಲಿ ಕೆಲ ದಿನ ನೆಲೆಸಿದ್ದ ಸುವರ್ಣಮ್ಮ, ಎರಡು ದಿನಗಳ ಹಿಂದೆಯೇ ಹರಿಹರ ನಗರಕ್ಕೆ ಬಂದಿದ್ದರು. ಗಂಗನರಸಿ ಗ್ರಾಮಕ್ಕೆ ತೆರಳದೇ ನಗರದ ಜೋಡಿ ಬಸವೇಶ್ವರ ದೇಗುಲದಲ್ಲಿ ವಾಸ್ತವ್ಯ ಹೂಡಿದ್ದರು. ತುಂಗಭದ್ರಾ ನದಿಯ ದಡದಲ್ಲಿರುವ ಈ ದೇಗುಲದ ಅನತಿ ದೂರದಲ್ಲಿ ರೈಲ್ವೆ ಹಳಿ ಇದೆ. ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಸ್ವಸಹಾಯ ಸಂಘ ಹಾಗೂ ಮೈಕ್ರೊ ಫೈನಾನ್ಸ್ಗಳಲ್ಲಿ ಪಡೆದಿದ್ದ ಸಾಲ ಮರುಪಾವತಿಸಲು ಸಾಧ್ಯವಾಗದ ತಾಯಿ–ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರ ನಗರದ ತುಂಗಭದ್ರಾ ನದಿಯ ರೈಲ್ವೆ ಸೇತುವೆಯ ಮೇಲೆ ಗುರುವಾರ ನಡೆದಿದೆ.</p><p>ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಸುವರ್ಣಮ್ಮ (60) ಹಾಗೂ ಪುತ್ರಿ ಗೌರಮ್ಮ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.</p><p>ಕೂಲಿ ಕಾರ್ಮಿಕರಾದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎಂದು ರೈಲ್ವೆ ಪೊಲೀಸ್ ಠಾಣೆಯ ಮೂಲಗಳು ತಿಳಿಸಿವೆ.</p><p>ಸುವರ್ಣಮ್ಮ ಅವರು ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ ₹ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ವಿಫಲರಾದ ಅವರು ಪುತ್ರಿಯೊಂದಿಗೆ ಜುಲೈ 1ರಂದು ಗ್ರಾಮ ತೊರೆದಿದ್ದರು.</p><p>ಇಬ್ಬರು ಪುತ್ರಿಯರ ಮನೆಯಲ್ಲಿ ಕೆಲ ದಿನ ನೆಲೆಸಿದ್ದ ಸುವರ್ಣಮ್ಮ, ಎರಡು ದಿನಗಳ ಹಿಂದೆಯೇ ಹರಿಹರ ನಗರಕ್ಕೆ ಬಂದಿದ್ದರು. ಗಂಗನರಸಿ ಗ್ರಾಮಕ್ಕೆ ತೆರಳದೇ ನಗರದ ಜೋಡಿ ಬಸವೇಶ್ವರ ದೇಗುಲದಲ್ಲಿ ವಾಸ್ತವ್ಯ ಹೂಡಿದ್ದರು. ತುಂಗಭದ್ರಾ ನದಿಯ ದಡದಲ್ಲಿರುವ ಈ ದೇಗುಲದ ಅನತಿ ದೂರದಲ್ಲಿ ರೈಲ್ವೆ ಹಳಿ ಇದೆ. ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>