ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಎಲ್ಲಾ ಜನಾಂಗದವರಿಗೆ ನ್ಯಾಯ ದೊರಕಿಸಿಕೊಟ್ಟಿರುವ ಕೀರ್ತಿ ಯಡಿಯೂರಪ್ಪ ಅವರಿಗಿದ್ದು, ಅವರಿಗೆ ಏನೇ ಆದರೂ ಎಲ್ಲಾ ಜನಾಂಗದವರೂ ಅವರ ಪರವಾಗಿ ನಿಲ್ಲುತ್ತಾರೆ. ಬೇರೆ ಪಕ್ಷದ ಶಾಮನೂರು ಶಿವಶಂಕರಪ್ಪ ಅವರೂ ಬೆಂಬಲ ಸೂಚಿಸಿದ್ದಾರೆ. ಬಿಎಸ್ವೈ ಬಿಜೆಪಿ ಪಕ್ಷ ಕಟ್ಟಿ ಬೆಳೆಸಿದವರು. ಜನರೂ ಅವರನ್ನು ಪ್ರಶ್ನಾತೀತ ನಾಯಕ ಎಂಬ ವಿಶ್ವಾಸದಲ್ಲಿ ಬೆಂಬಲಿಸಿದ್ದಾರೆ’ ಎಂದು ಹೇಳಿದರು.