ಉಚ್ಚಂಗಿದುರ್ಗ: ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಅವರ ಹಿರಿಯ ಸಹೋದರಿ, ಕನಕನ ಬಸಾಪುರ ಗ್ರಾಮದ ವಾಸಿ ಉಚ್ಚಂಗಿದುರ್ಗ ಹನುಮಂತಮ್ಮ (80) ವಯೋಸಹಜ ಕಾಯಿಲೆಯಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.
ಮೃತರಿಗೆ ನಾಲ್ವರು ಗಂಡು ಮಕ್ಕಳಿದ್ದಾರೆ. ಅಂತ್ಯಕ್ರಿಯೆಯನ್ನು ಗ್ರಾಮದ ರುದ್ರಭೂಮಿಯಲ್ಲಿ ಬುಧವಾರ ನೆರವೇರಿಸಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.